ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್ ಹಾಗೂ ಉಂಗುರವನ್ನು ತೆಗೆದುಕೊಂಡು ಪರಾರಿಯಾಗಿದ್ದರು.
ಈ ಘಟನೆ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆ ಅಂದಿನ ಡಿವೈಎಸ್ಪಿ ಓಂಕಾರ ನಾಯ್ಕ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಕುರಿತು ಸರ್ಕಾರದ ಪರ ವಕೀಲರಾದ ಪುಷ್ಪ ಮಂಡಿಸಿದ ವಾದವನ್ನು ಅಲಿಸಿದ ನ್ಯಾಯಾಧೀಶರಾದ ಬಿ.ಆರ್. ಪಲ್ಲವಿ ಅವರು ಕಲಂ 302 ಮತ್ತು ಕಲಂ7 , 25 ಶಸ್ತ್ತಾಸ್ತ್ರ ಕಾಯ್ಧೆ ಅಡಿ ಆರೋಪ ದೃಢಪಟ್ಟಿದ್ದರಿಂದ ಭುಜಂಗ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವನ್ನು ನೀಡಿ ಆದೇಶ ನೀಡಿದೆ. ಒಂದು ವೇಳೆ ದಂಡ ಕಟ್ಟಲು ಆಗದೆ ಹೋದರೆ ಒಂದು ವರ್ಷ ಹೆಚ್ಚುವರಿ ಶಿಕ್ಷೆಯನ್ನು ಅನುಭವಿಸಲು ಸೂಚಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್