ನವೆಂಬರ್ ತಿಂಗಳಿನಲ್ಲಿ ಅನ್ಯಭಾಷೆಗಳ ವೈಭವೀಕರಣ ಸಲ್ಲ – ಮೆಣಸೆ ಆನಂದ್|Ripponpet

ನವೆಂಬರ್ ತಿಂಗಳಲ್ಲಿ ಅನ್ಯ ಭಾಷೆಗಳ ವೈಭವೀಕರಣ ಸಲ್ಲ

ರಿಪ್ಪನ್‌ಪೇಟೆ : ಕನ್ನಡ ಕಲರವದ ತಿಂಗಳಾದ ನವೆಂಬರ್ ನಲ್ಲಿ ಕನ್ನಡದ ಕಂಪು ರಾಜ್ಯಾದ್ಯಂತ ಮೇಳೈಸುತ್ತಿರುತ್ತದೆ.ಇಂತಹ ಸಂಧರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಅನ್ಯ ಭಾಷೆಗಳ ವೈಭವಿಕರಿಸಿದರೆ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದಂತಾಗುತ್ತದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆನಂದ್ ಮೆಣಸೆ ಹೇಳಿದರು.




ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೆಲ ಜಲ ಉಳಿವಿಗಾಗಿ ಹೋರಾಟ ಮಾಡುವುದು ಎಲ್ಲಾ ಕನ್ನಡ ಸಂಘಗಳ ಉದ್ದೇಶ. ಕಲಾ ಕೌಸ್ತುಭ ಕನ್ನಡ ಸಂಘ ಕಳೆದ 28 ವರ್ಷಗಳಿಂದ ಕನ್ನಡ ಭಾಷೆ ಉಳಿವಿಗಾಗಿ ಕನ್ನಡ ನೆಲ ಜಲದ ಪರವಾಗಿ ಕೆಲಸ ಮಾಡಿಕೊಂಡು ಬಂದಿದ್ದು ಸ್ವಾಗತಾರ್ಹವಾಗಿದ್ದು,ನ.27ರಂದು ನಡೆಯುವ ಆಳ್ವಾಸ್ ನುಡಿಸಿರಿ ವಿರಾಸತ್ ಕಾರ್ಯಕ್ರಮಕ್ಕೆ ಸಹಯೋಗ ನೀಡಿರುವ ವಿಚಾರ ಮಾಧ್ಯಮದ ಮೂಲಕ ನಮಗೆ ತಿಳಿದಿದೆ. ವಿವಿಧ ಭಾಷೆಗಳನ್ನು ವೈಭವಿಕರಿಸುವ ವಿವಿಧ ಸಂಸ್ಕೃತಿಗಳನ್ನ ಬಿಂಬಿಸುವ ಕಾರ್ಯಕ್ರಮಕ್ಕೆ ನವೆಂಬರ್ ತಿಂಗಳಿನಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಸಹಮತ ವ್ಯಕ್ತಪಡಿಸಿರುವುದು ಕನ್ನಡಕ್ಕೆ ಮಾಡಿರುವ ಅವಮಾನವಾಗಿದೆ ಎಂದರು.




ನವಂಬರ್ ಎಂದರೆ ಕನ್ನಡದ ಕಲರವ ಇಡೀ ತಿಂಗಳು ರಾಜ್ಯಾದ್ಯಂತ ಕನ್ನಡದ ಸಂಭ್ರಮ ನಡೆಯುತ್ತಿರುತ್ತದೆ. ಆದರೆ ನವೆಂಬರ್ 25 ಮತ್ತು 26 ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಂಡಿದ್ದು ನಮ್ಮ ಸಂಘ ಯಾವುದೇ ಕನ್ನಡದ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸುತ್ತದೆ.ಆದರೆ ನವೆಂಬರ್ ತಿಂಗಳಿನಲ್ಲಿ ಕನ್ನಡ ನಾಡಿನಲ್ಲಿ ಅನ್ಯಭಾಷೆಗಳ ವೈಭವಿಕರಣ ಸಹಿಸಲು ಸಾಧ್ಯವೇ ಇಲ್ಲಾ,
ಈ ಬಗ್ಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು ಇಲ್ಲದಿದ್ದಲ್ಲಿ ಕಸ್ತೂರಿ ಕನ್ನಡ ಸಂಘದ ಸಭೆ ಕರೆದು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.




ಪತ್ರಿಕಾಗೋಷ್ಠಿಯಲ್ಲಿ ಆರ್ ಎನ್‌ಮಂಜುನಾಥ್, ಕೆರೆಹಳ್ಳಿ ರವೀಂದ್ರ, ದೇವರಾಜ್ ಕುಷನ್ ,ಆಸೀಫ಼್ ಭಾಷಾಸಾಬ್, ಫ್ಯಾನ್ಸಿ ರಮೇಶ್,ಹಸನಬ್ಬ,ಚಿಗುರು ಶ್ರೀಧರ್, ಗಣಪತಿ,ಆರ್ ಡಿ ಶೀಲಾ, ಧನಲಕ್ಷ್ಮಿ,ಶ್ಯಾಮಲ,ಹೇಮಾವತಿ,ಸೀಮಾ, ಈಶ್ವರಪ್ಪಗೌಡ, ಅರವಿಂದ್ ಭಟ್, ಯೋಗೇಂದ್ರಪ್ಪ ಗೌಡ, ಇನ್ನು ಮುಂತಾದವರು ಉಪಸಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

4 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

6 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

9 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

9 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

10 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

10 hours ago