ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.
ಇತ್ತೀಚೆಗಷ್ಟೇ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕರಾದ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ, ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ, ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದ್ದು ಕೇಂದ್ರ ಸರಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.
ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ ಇದೇ ನವೆಂಬರ್ 22ರಂದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ, ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದು ತಿಳಿಸಿದ್ದಾರೆ.
ಸರಿಸುಮಾರು ಐವತ್ತು ಲಕ್ಷ ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿ ರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…