Headlines

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ.

ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.



ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು

ಏನಿದು ಘಟನೆ?



ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ, ಪಿಎಸ್ಐ ನಾಗರಾಜ್, ಹೆಚ್ ಸಿ ವೆಂಕಟೇಶ್ ಮತ್ತು ದೇವರಾಜ ನಾಯ್ಕ ಎಂಬುವವರ ಮೇಲೆ ವಿಚಾರಣೆಗೆ ಬಂದಿದ್ದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಸಮವಸ್ತ್ರ ಹರಿದು, ಅವಾಚ್ಯವಾಗಿ ಬೈದು , ಹಲ್ಲೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಕ್ಷನ್ 504, 353, 332, 506 r/w, 34 IPC ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಬಂಧಿಸಲಾಗಿದೆ.

About The Author

Leave a Reply

Your email address will not be published. Required fields are marked *

Exit mobile version