ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.




ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ಇತ್ತೀಚೆಗೆ ಬಂಗಾರಪ್ಪ ಸರ್ಕಲ್ ಎಂದು ಆಮ್ ಅದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳಿಂದ ನಾಮಕರಣ ಮಾಡಲಾಗಿತ್ತು.

ಆದರೆ ಮಂಗಳವಾರ ರಾತ್ರಿ ಯಾರೋ ಕಿಡಿಗೇಡಿಗಳು ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿ ,ಸಮಾಜವಾದಿ ಚಿಂತಕ ದಿ|| ಎಸ್ ಬಂಗಾರಪ್ಪ ರವರ ನಾಮಫಲಕವನ್ನು ಕಿತ್ತು ಹಾಕುವ ಮೂಲಕ ಧೀಮಂತ ನಾಯಕನಿಗೆ ಅವಮಾನ ಎಸಗಿದ್ದಾರೆ.




ಈ ಬಗ್ಗೆ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೊಡು ರವರನ್ನು ಪೋಸ್ಟ್ ಮ್ಯಾನ್ ನ್ಯೂಸ್ ಸಂಪರ್ಕಿಸಿ ಮಾತನಾಡಿದಾಗ ಎಸ್ ಬಂಗಾರಪ್ಪನವರು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ ಅಂತಹವರ ಹೆಸರನ್ನು ಒಂದು ವೃತ್ತಕ್ಕೆ ಬಳಸುವಾಗ ಯಾವುದೇ ಅನುಮತಿಯ ಅವಶ್ಯಕತೆ ಇರುವುದಿಲ್ಲ ಏಕೆಂದರೆ ಅವರೊಬ್ಬ ಪ್ರಶ್ನಾತೀತ ನಾಯಕ. ಸುಸಂಸ್ಕೃತ ಜಿಲ್ಲೆಯಲ್ಲಿ ಅವರ ನಾಮಫಲಕವನ್ನು ಕಿತ್ತು ಹಾಕುವ ಹೀನ ಮನಸ್ಥಿತಿಯ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದರು.




ಪೊಲೀಸರ ಕರ್ತವ್ಯ ಲೋಪದಿಂದ ಈ ದುಷ್ಕ್ರುತ್ಯ ನಡೆದಿದ್ದು,ಕೇವಲ ಮರಳು ಗಾಡಿಯನ್ನು ಎಣಿಸುವುದರಲ್ಲಿಯೇ ಅವರು ನಿರತಾಗಿದ್ದಾರೆ ಅಂತಹ ಜನನಿಬಿಡ ಪ್ರದೇಶದಲ್ಲಿ ಒಬ್ಬ ಮಹಾನ್ ವ್ಯಕ್ತಿಯ ನಾಮಫಲಕ ಕಿತ್ತು ಹಾಕುವವರೆಗೂ ಪೊಲೀಸರು ಏನು‌ ಮಾಡುತಿದ್ದರು ಎಂದು ಪ್ರಶ್ಬಿಸಿದರು.

ಕೂಡಲೇ ನಾಮಫಲಕವನ್ನು ಕಿತ್ತು ಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಈ ಸಂಧರ್ಭದಲ್ಲಿ ಅವರು ಒತ್ತಾಯಿಸಿದರು.

ಆಮ್ ಆದ್ಮಿ‌ಪಕ್ಷದವರು ಯಾವುದೇ ಅನುಮತಿ ಪಡೆಯದೇ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ ಮಾಡಿ ನಾಮಫಲಕ ಅಳವಡಿಸಿದ್ದರು ಇದರ ಬಗ್ಗೆ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷರಾದ ಗಣೇಶ್ ಸೂಗೊಡು ರಲ್ಲಿ ವಿಚಾರಿಸಿದಾಗ ಅವರು ಸರಿಯಾದ ರೀತಿಯಲ್ಲಿ ಸ್ಪಂದಿಸಿರಲಿಲ್ಲ ಹೀಗಾಗಿ ಗ್ರಾಪಂ ವತಿಯಿಂದ ತೆರವುಗೊಳಿಸಲು ಹೊಸನಗರ ಪೊಲೀಸ್ ಠಾಣೆಯಲ್ಲಿ ರಕ್ಷಣೆ ಕೋರಲಾಗಿತ್ತು.ಅದರಂತೆ ಇಂದು ತೆರವಿಗೆ ಸ್ಥಳಕ್ಕೆ ಹೋದಾಗ ಆ ನಾಮಫಲಕವನ್ನು ರಾತ್ರೋರಾತ್ರಿ ಯಾರೋ ಕಿಡಿಗೇಡಿಗಳು ತೆರವುಗೊಳಿಸಿದ್ದರು.“…..ಪ್ರಭು.ಪಿಡಿಒ,ಹರಿದ್ರಾವತಿ ಗ್ರಾಪಂ


                       
                                             
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago