ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು.

ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು.


ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ ಅವರಿಗೆ ಸಮರ್ಪಕವಾಗಿ ಗೌರವ ಸೂಚಿಸಲಾಗಿದೆ ಎಂದರು.

ಈ ಸಂಧರ್ಭದಲ್ಲಿ ತಾಲೂಕ್ ಆಮ್ ಅದ್ಮಿ ಪಕ್ಷದ ಉಪಾಧ್ಯಕ್ಷ ಹಸನಬ್ಬ ,ಮುಖಂಡರಾದ ಸಂತೋಷ್ ಆಶ್ರೀತಾ ,ರವಿ ,ಈಶ್ವರಪ್ಪ ಗೌಡ ,ಇದ್ದರು.


ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ಆಟೋ ಟಾಪ್ ವಿತರಣೆ

ಆಮ್ ಆದ್ಮಿ ಪಕ್ಷದ ಸಂಸ್ಥಾಪನ ದಿನಾ‍ಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಟೋ ಟಾಪ್ ನ್ನು ಉಚಿತವಾಗಿ ವಿತರಿಸಲಾಯಿತು.

ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ 10 ವರ್ಷಗಳಾಗಿದ್ದು ಆ ಸಂಭ್ರಮದ ಹಿನ್ನಲೆಯಲ್ಲಿ ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 100 ಆಟೋಗಳಿಗೆ ಉಚಿತವಾಗಿ ಆಮ್ ಆದ್ಮಿ ಪಕ್ಷದ ಚಿಹ್ನೆಯಿರುವ ಟಾಪ್ ವಿತರಿಸಲಾಗುತಿದ್ದು ಈಗಾಗಲೇ ಕ್ಷೇತ್ರದಾದ್ಯಂತ 20 ಆಟೋಗಳಿಗೆ ಉಚಿತವಾಗಿ ವಿತರಿಸಲಾಗಿದೆ ಎಂದು ತಾಲೂಕ್ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗಣೇಶ್ ಸೂಗೋಡು ಮಾಹಿತಿ ನೀಡಿದರು.

ಆಮ್‌ಆದ್ಮಿ ಪಕ್ಷದ ಚಿಹ್ನೆಯುಳ್ಳ ಉಚಿತ ಆಟೋ ಟಾಪ್ ಬೇಕಾದಲ್ಲಿ ಈ ಕೆಳಕಂಡ ನಂಬರ್ ಗೆ ಸಂಪರ್ಕಿಸಲು ತಿಳಿಸಿದ್ದಾರೆ.

ಹಸನಬ್ಬ(ಉಪಾಧ್ಯಕ್ಷರು) – 90710 97866
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

4 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

5 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

9 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

9 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

9 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

9 hours ago