ಶಿಕಾರಿಪುರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್ಗೆ ಶಾಕ್ ನೀಡಿದೆ.
ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.
ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ ಶಿಕಾರಿಪುರ ಕ್ಷೇತ್ರದಲ್ಲಿ ಆಪರೇಶನ್ ಕಮಲವನ್ನು ಬಿಜೆಪಿ ಆರಂಭಿಸಿದ್ದು, ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಮುಂಬರುವ ಚುನಾವಣೆಯಲ್ಲಿ ಬಿ. ವೈ ವಿಜಯೇಂದ್ರ ಯಡಿಯೂರಪ್ಪ ಬದಲಿಗೆ ಕಣಕ್ಕಿಳಿಯುತ್ತಿದ್ದಾರೆ. ಈ ನಡುವೆ ಜೆಡಿಎಸ್ ಅಭ್ಯರ್ಥಿಯನ್ನೇ ಸೂಕ್ತ ಸ್ಥಾನಮಾನದ ಭರವಸೆಯನ್ನು ನೀಡುವ ಮೂಲಕ ಬಿಜೆಪಿ ಆಪರೇಶನ್ ಕಮಲ ಕೈಗೊಂಡಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…