ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್ ಇದ್ರೆ ಕೇಂದ್ರ ಸರ್ಕಾರದ ಅನುಮತಿ ಪಡೆದುಕೊಂಡು ಭೂಮಿ ಹಂಚಿಕೆ ಮಾಡಬೇಕು. ಇಲ್ಲ ಅಂದ್ರೆ ಕಾಂಗ್ರೆಸ್ ಸರ್ಕಾರ ಈ ಕೆಲಸ ಮಾಡಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಕರ್ತವ್ಯ ಲೋಪದಿಂದಾಗಿ ಇಂದು ಶರಾವತಿ ಮುಳುಗಡೆ ಸಂತ್ರಸ್ತರು ಜಮೀನು ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ. ಪರಿಸರವಾದಿಗಳ ಹೆಸರಿನಲ್ಲಿ ಕೆಲವರು ಹೈಕೋರ್ಟ್ಗೆ ಹೋಗಿರುವುದರಿಂದ ಡಿ ನೋಟಿಫಿಕೇಶನ್ ರದ್ದಾಗಿದೆ. ಇದು ಇಡೀ ಶರಾವತಿ ಮುಳುಗಡೆ ಸಂತ್ರಸ್ತರ ಬದುಕಿನ ಪ್ರಶ್ನೆಯಾಗಿದೆ ಎಂದರು. ಶಿವಮೊಗ್ಗ ತಾಲ್ಲೂಕಿನ ಕೂಡಿ ಮತ್ತು ಕೂರಂಬಳ್ಳಿಯ ಎರಡು ಸರ್ವೆ ನಂಬರ್ಗಳಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹೈಕೋರ್ಟ್ ಕೇಂದ್ರದ ಅನುಮತಿ ಪಡೆದಿಲ್ಲವೆಂದು ಹೇಳಿದೆ.
ಆದರೆ, ಸರ್ಕಾರ 56 ಡಿನೋಟಿಫಿಕೇಶನ್ ಖುಲ್ಲಾ ಮಾಡಿದೆ. ಕಾನೂನು ಮಾಡಿ ಶರಾವತಿ ಸಂತ್ರಸ್ತರನ್ನು ಕಾಡಿನಲ್ಲಿ ಕೂರಿಸಿದ್ದೇ ಸರ್ಕಾರ. ಆದರೆ ಈಗ ಸರ್ಕಾರ ಡಿನೋಟಿಫಿಕೇಶನ್ ರದ್ದುಗೊಳಿಸಿ ಮುಳುಗಡೆ ಸಂತ್ರಸ್ಥರನ್ನು ಅತಂತ್ರಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರು ಅತಂತ್ರರಾಗಲು ಸೊರಬ ಹಾಗೂ ಸಾಗರ ಶಾಸಕರೇ ನೇರ ಕಾರಣರಾಗಿದ್ದಾರೆ. ಅವರು ಸರಿಯಾಗಿ ಸಂತ್ರಸ್ತರ ಪರವಾಗಿ ನಿಲ್ಲದೆ ಇರುವುದೇ ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗಿದೆ. ಶರಾವತಿ ಸಂತ್ರಸ್ತರಿಗೆ ಅನ್ಯಾಯ ಮಾಡಿರುವ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆ ಪರಿಹರಿಸುವುದಾಗಿ ಹೇಳಿದರು.
ಶೀಘ್ರದಲ್ಲೇ ಹೋರಾಟ:
ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ. ಶರಾವತಿ ಸಂತ್ರಸ್ಥರ ಸಮಸ್ಯೆಯನ್ನು ಬಿಜೆಪಿ ಸರ್ಕಾರ ದ್ವಿಗುಣಗೊಳಿಸುತ್ತಿದೆ. ಅರಣ್ಯ ಅಧಿಕಾರಿಗಳು ಸಂತ್ರಸ್ಥರಿಗೆ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಸುಮಾರು 18 ಸಾವಿರಕ್ಕೂ ಅಧಿಕ ಕುಟುಂಬಗಳು ಅತಂತ್ರವಾಗಿವೆ. ಇನ್ನು ನಾವು ಸುಮ್ಮನಿರುವುದಿಲ್ಲ. ಹಿರಿಯರಾದ ಕಾಗೋಡು ತಿಮ್ಮಪ್ಪ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೂ ಒಳಗೊಂಡಂತೆ ಬಹುದೊಡ್ಡ ಹೋರಾಟ ಪ್ರಾರಂಭಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ಬಿ. ಪ್ರಸನ್ನಕುಮಾರ್, ಬಿ.ಎ.ರಮೇಶ್ ಹೆಗ್ಡೆ, ಎನ್.ಪಿ. ಧರ್ಮರಾಜ್, ರಮೇಶ್ ಶಂಕರಘಟ್ಟ, ಜಿ.ಡಿ. ಮಂಜುನಾಥ್, ಚಂದ್ರಭೂಪಾಲ್, ರಮೇಶ್ ಇಕ್ಕೇರಿ, ವಿಜಯಕುಮಾರ್, ಚಂದ್ರಶೇಖರ್, ಹೆಚ್.ಆರ್. ಮಹೇಂದ್ರ ಮತ್ತಿತರರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್