ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು.

ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ. ಬಡತನದಲ್ಲಿಯೇ ಅರಳಿದ ಪ್ರತಿಭೆ ಇವರು. ಸೂಲಗಿತ್ತಿಯ ಕಾಯಕ ಮಾಡುವುದರಲ್ಲಿ ನಿಸ್ಸೀಮರು

ಎಷ್ಟೇ ಕಗ್ಗತ್ತಲು ಆವರಿಸಿರಲಿ, ಮಳೆ ಸುರಿಯುತ್ತಿರಲಿ, ಗರ್ಭಿಣಿಯ ನರಳಾಟ ಸುದ್ದಿ ಕೇಳಿದ್ರೆ ಸಾಕು ಅಲ್ಲಿ ಹಾಜರಾಗುತಿದ್ದರು. ಕತ್ತಲಾಗಿದ್ರು ಕೈಯಲ್ಲಿ ಬುಡ್ಡಿ ದೀಪದ ಲಾಟೀನು ಹಿಡಿದು ಪ್ರಸವ ಮಾಡಿಸುತಿದ್ದ ಸೂಲಗಿತ್ತಿ. ನಾಟಿ ವೈದ್ಯ, ಸಾಂತ್ವನದ ಮೂಲಕ ಸುಲಭವಾಗಿ ಹೆರಿಗೆ ಮಾಡಿಸಬಲ್ಲ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಸಂಚಾರಿ ಆಸ್ಪತ್ರೆಯಂತೆ ಕೆಲಸ ಮಾಡುತಿದ್ದ ಸೂಲಗಿತ್ತಿ ಜಯಮ್ಮ.

ಜಯಮ್ಮ ರವರು ಮೊದಲು ತನ್ನ ಮನೆಯಲ್ಲಿ ಹೆರಿಗೆ ಮಾಡಿಸುತ್ತಾ,ನಂತರ ಪಟ್ಟಣದಲ್ಲಿ ಅದಾದ ಬಳಿಕ ಸುತ್ತಮುತ್ತಲಿನ ಗ್ರಾಮದಲ್ಲಿ ಎಂತಹ ಕಷ್ಟದ ಹೆರಿಗೆಯಾದರೂ ತನ್ನ ಅನುಭವದಿಂದ ಮಾಡಿಸುವ ಕಾಯಕ ಜಯಮ್ಮ ನವರದು. ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಸುಮಾರು 40 ವರ್ಷದಿಂದ ಸುತ್ತಮುತ್ತಲ ಸುಮಾರು 40 ಗ್ರಾಮಗಳಲ್ಲಿ  ಸಾವಿರಾರು ಹೆರಿಗೆಗಳನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಮಾಡಿಸಿದ ಕೀರ್ತಿ ಈಕೆಗಿದೆ.ಇನ್ನೊಂದು ಖುಷಿಯ ವಿಚಾರ ಏನೆಂದರೇ ಸಾವಿರಾರು ಹೆರಿಗೆ ಮಾಡಿಸುವ ಪಯಣದಲ್ಲಿ ಒಂದೇ ಒಂದು ಸಾವು ನೋವು ಅನುಭವಿಸಿಲ್ಲ ಅದೇ ಇವರ ಹೆಗ್ಗಳಿಕೆ…

ಇವರ ಸೇವೆಯನ್ನು ಗುರುತಿಸಿ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ವತಿಯಿಂದ ಜಯಮ್ಮ ರವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

ಈ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ, ಗ್ರಾಪಂ ಅಧ್ಯಕ್ಷೆ ಮಂಜುಳಾ ಕೆ ರಾವ್,ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್,ಕೆ ಎಸ್ ಪ್ರಶಾಂತ್ , ಡಾ.ರಾಜನಂದಿನಿ
ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ,ಜಿಪಂ ಮಾಜಿ ಸದಸ್ಯರುಗಳಾದ ಬಿ‌ ಪಿ ರಾಮಚಂದ್ರ ,ಎ ಟಿ ನಾಗರತ್ನ ,ಸಮಿತಿಯ ಪ್ರಮುಖರಾದ ನಾಗರತ್ನ ದೇವರಾಜ್, ಆರ್ ಟಿ ಗೋಪಾಲ್ , ಎನ್ ಸತೀಶ್ ,ಎಂ ಬಿ ಮಂಜುನಾಥ್ ,ಸುರೇಶ್ ಸಿಂಗ್‌ , ಯುವ ಉದ್ಯಮಿ ಪವನ್ ಶೆಟ್ಟಿ,ಪದ್ಮಾ ಸುರೇಶ್, ಉಮಾ ಸುರೇಶ್, ಲೀಲಾ ಶಂಕರ್,ಲಕ್ಷ್ಮಿ ಶ್ರೀನಿವಾಸ್ ಹಾಗೂ ಇನ್ನಿತರರು ಇದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago