ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress

ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು.




ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದಾಗಿ ಮನೆಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಈ ವರೆಗೂ ಭೂಮಿಯ ಹಕ್ಕು ನೀಡದೆ ಅವರನ್ನು ನಿರಾಶ್ರಿತರನ್ನಾಗಿ ಮಾಡಿ ಕತ್ತಲಲ್ಲಿ ಕಾಲ ಕಳೆಯುವಂತೆ ಮಾಡಲಾಗಿದೆ ಈ ಬಗ್ಗೆ ಬೃಹತ್ ಹೋರಾಟದ ಮೂಲಕ ಹಕ್ಕುಪತ್ರ ಕೊಡಿಸಲು ಪ್ರಯತ್ನ ಮಾಡುವುದು ಅನಿರ್ವಾಯವಾಗಿದೆ ಎಂದರು.

ಮಲೆನಾಡ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದ ಅವರು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸ್ಥಿರ ಸರ್ಕಾರವಾಗಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ವಿತವಾಗಿದ್ದು ಕರ್ನಾಟಕದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ನಮ್ಮ ತಂದೆ ಎಸ್.ಬಂಗಾರಪ್ಪ ಸಾಹೇಬ್ರ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಟ್ಟಿದ್ದರೂ ಅದರೆ ಇಂದಿನ ರಾಜ್ಯ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಮಾಡಲು ಮುಂದಾಗಿದೆ.ಹಾಗೇನಾದರೂ ಸರ್ಕಾರ ಮೀಟರ್ ಅಳವಡಿಸಲು ಮುಂದಾದರೆ ಅದನ್ನು ಕಿತ್ತು ಎಸೆಯುವುದರಲ್ಲಿ ನಾನೇ ಮೊದಲಿಗನಾಗುವೆನೆಂದರು.


ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ ಜನಸಾಮಾನ್ಯರು ರೈತರು ಹಿಂದುಳಿದವರ ಸಹಿತ ಎಲ್ಲರ ಸಮಸ್ಯೆಗೆ ಕಾಂಗ್ರೆಸ್ ಪಕ್ಷ ಮಾತ್ರ ಏಕೈಕ ಪರಿಹಾರವಾಗಿದೆ.ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಉಳುವವನೇ ಹೊಲದೊಡೆಯ ಹೋರಾಟದ ಮೂಲಕ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಹೋರಾಟ ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದರು.




ಅರಣ್ಯ ಭೂಮಿ ಸಾಗುವಳಿದಾರರಿಗೆ ವಿಶೇಷ ನ್ಯಾಯಾಲಯದಿಂದ ನೋಟಿಸ್‌ಗಳು ಬರುತ್ತಿವೆ.ರೈತರನ್ನು ಭೂಗಳ್ಳರ ಹಾಗೆ ಬಿಂಬಿಸಲಾಗುತ್ತಿದೆ.ಬಸವರಾಜ್ ಬೊಮ್ಮಾಯಿ ಅವರಿಗೆ ಧಮ್ ಇದ್ರೆ.ತಾಕತ್ ಇದ್ರೆ ರೈತರ ಬಗ್ಗೆ ನಿಜವಾಗಿ ಕಾಳಜಿ ಇದ್ರೆ ಸಾಗುವಳಿದಾರರಿಗೆ ತಮ್ಮ ಅಧಿಕಾರಾವಧಿಯಲ್ಲಿಯೇ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಇನ್ನೂ ಮೂರು ನಾಲ್ಕು ತಿಂಗಳಿನಲ್ಲಿ ಭೂ ಒಡೆತನದ ಹಕ್ಕು ಕೊಡಿಸಲಿ ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಆಗ ನಾವೇ ಸಾಗುವಳಿದಾರಿಗೆ ಹಕ್ಕು ಪತ್ರ ವಿತರಿಸುತ್ತೇವೆಂದರು.




ಜಿಲ್ಲಾಧ್ಯಕ್ಷ ಸುಂದರೇಶ್,ತಾಲ್ಲೂಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್,ಮಾಜಿಶಾಸಕ ಗೋಪಾಲಕೃಷ್ಣ ಬೇಳೂರು,ಆರ್ ಎಂ ಮಂಜುನಾಥ್ ಗೌಡ,ಮಾಜಿ ಎಂ.ಎಲ್.ಸಿ.ಆರ್.ಪ್ರಸನ್ನಕುಮಾರ್,ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ,ಪಕ್ಷದ ಮುಖಂಡರಾದ ಡಾ.ರಾಜಾನಂದಿನಿ,ಅನಿತಾಕುಮಾರಿ,ಕಲಗೋಡು ರತ್ನಾಕರ್,ಇನ್ನಿತರ ಪಕ್ಷದ ಸ್ಥಳೀಯ ಮುಖಂಡರು ಬಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

8 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

24 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

24 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago