ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ.
ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ ಪ್ರಕಾರ ಮೂತ್ರ ವಿಸರ್ಜನೆಗೆ ಹೋದಾಗ ಈ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಓಡಿಶಾ ರಾಜ್ಯದ ವ್ಯಕ್ತಿ ಎಂದು ತಿಳಿದುಬಂದಿದೆ. ಆತ ಕುಡಿದು ಮೂತ್ರ ವಿಸರ್ಜನೆಗೆ ಬಂದಿದ್ದನಾ ಅಥವಾ ಕುಡಿದು ಟ್ರಾಕ್ ಬಳಿ ಮಲಗಿದ್ದನಾ? ಆತ್ಮಹತ್ಯೆಗೆ ಮುಂದಾಗಿದ್ದನಾ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕಿದೆ.
ಸದ್ಯಕ್ಕೆ ಆತನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಸಹಾಯದಿಂದ ಆತನನ್ನ ಮೆಗ್ಗಾನ್ ಗೆ ದಾಖಲಿಸಲಾಗಿದೆ. ರೈಲ್ವೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮಜರುಗಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್