ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !?

ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.




ವಿಧಾನಸಭಾ ಚುನಾವಣೆ ಸಮೀಪಸುತ್ತಿದ್ದಂತೆ ಸಾಗರ ವಿಧಾನಸಭಾ ಕ್ಷೇತ್ರ ಈಗ ಕುತೂಹಲದತ್ತ ಮುಖ ಮಾಡಿದಂತೆ ಕಾಣಿಸುತ್ತಿದೆ. ಕಾರಣ ಇಲ್ಲಿಯವರೆಗೆ ಬಿಜೆಪಿ ಪಕ್ಷದಲ್ಲಿ ಶಾಸಕರಾಗಿ ಹರತಾಳು ಹಾಲಪ್ಪ ಇದ್ದು ಅವರ ಜಾಗಕ್ಕೆ ಕುತ್ತು ಬಂದಂತೆ ಕಾಣಿಸುತ್ತಿದೆ.

ಸದ್ದಿಲ್ಲದೆ ಬಿಜೆಪಿ ಕಡೆ ಮುಖ ಮಾಡಿದ್ರ ಕೆ ಎಸ್ ಪ್ರಶಾಂತ್

ಸಾಗರದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪ್ರಶಾಂತ್ ರವರು ಶಿವಮೊಗ್ಗ ಮಾಜಿ ಸಂಸದ ಕೆಜೆ ಶಿವಪ್ಪರವರ ಪುತ್ರ. ಕೆ ಎಸ್ ಪ್ರಶಾಂತ್ ಇಲ್ಲಿಯವರೆಗೆ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಆದರೆ ಸದ್ದಿಲ್ಲದೆ ಬಿಜೆಪಿ ಕಡೆ ಮುಖ ಮಾಡಿದ್ರ ಎಂಬ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ. ಸಂಘ ಪರಿವಾರದ ಹಿಂದೂ ಜಾಗರಣವೇದಿಕೆಗೆ ಕೆ ಎಸ್ ಪ್ರಶಾಂತ್ ಸೇರ್ಪಡೆಗೊಂಡಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗೆ ಬಿಜೆಪಿಯ ಹಲವು ಕಾರ್ಯಕ್ರಮಗಳಲ್ಲಿ   ಕೆಎಸ್ ಪ್ರಶಾಂತ್ ಭಾಗಿಯಾಗುತ್ತಿದ್ದಾರೆ.




ಪ್ರಶಾಂತ್ ಅವರಿಗೆ ಸಾಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಸಿಗಲಿದೆಯೇ? ಎಂಬ ಕುತೂಹಲ ಕೆರಳಿದೆ. ಪ್ರಶಾಂತ್ ಸಾಗರ ವಿಧಾನಸಭ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಅರ್ಜಿಯನ್ನು ಸಲ್ಲಿಸಿಲ್ಲ. ಇದರಿಂದ ಪ್ರಶಾಂತ್ ಅವರು ಬಿಜೆಪಿಯಿಂದ ಸಾಗರದ ಅಭ್ಯರ್ಥಿಯಾಗುವ ಎಲ್ಲಾ ಲಕ್ಷಣಗಳಿವೆ. ಕೆ ಎಸ್ ಪ್ರಶಾಂತ್ ಅವರು ಇಂಧನ ಸಚಿವ ಸುನೀಲ್ ಕುಮಾರ್ ಅವರ ಸಂಬಂಧಿ ಆಗಿದ್ದಾರೆ.






ಕೆ ಎಸ್ ಪ್ರಶಾಂತ್ ಯಾರು ? ಬಿಜೆಪಿ ಯಾಕೆ ?

ರಾಜ್ಯ ಸರ್ಕಾರದ ಇಂಧನ ಸಚಿವರಾಗಿರುವ ಸುನೀಲ್ ಕುಮಾರ್ ರವರ ಹೆಂಡತಿ ಅಣ್ಣ ಆಗಿರುವ ಪ್ರಶಾಂತ್ ಈ ಬಾರಿ ಸಾಗರ ಕ್ಷೇತ್ರದಲ್ಲಿ ಚುನಾವಣೆ ನಿಲ್ಲುವ ಸಾಧ್ಯತೆ ಇದ್ದು ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಚಿವ ಸುನಿಲ್ ಕುಮಾರ್ ಕೂಡ ಪ್ರಶಾಂತ್ ಪರ ಬ್ಯಾಟಿಂಗ್ ಮಾಡುವ ಸಾಧ್ಯತೆಯಿದೆ. ಹೀಗೇನಾದರೂ ಆದರೆ ಹಾಲಪ್ಪನವರ ಜಾಗ ಒತ್ತುವರಿ ಆಗಲಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಚಾಣಾಕ್ಷ ಹರತಾಳು ಹಾಲಪ್ಪ

ಆದರೆ ಸಾಗರ ವಿಧಾನಸಭಾ ಕ್ಷೇತ್ರದಾದ್ಯಂತ ತನ್ನದೇ ಆದ ಕಾರ್ಯಕರ್ತರ ಪಡೆ ಕಟ್ಟಿಕೊಂಡು,ಬಿಡುವಿಲ್ಲದೇ ಕಾರ್ಯೊನ್ಮುಖರಾಗಿರುವ ಹರತಾಳು ಹಾಲಪ್ಪ ರಿಗೆ ಬಿಜೆಪಿ ಟಿಕೆಟ್ ತಪ್ಪಿಸುವುದು ಅಷ್ಟು ಸುಲಭದ ಮಾತಲ್ಲ,ರಾಜಕೀಯ ತಂತ್ರಗಾರಿಕೆ,ಚುನಾವಣಾ ಚಾಣಾಕ್ಷತೆಯನ್ನು ಅರಿದು ಕುಡಿದಿರುವ ಹರತಾಳು ಹಾಲಪ್ಪ ಇವೆಲ್ಲವುಗಳನ್ನು ಹೇಗೆ ಎದುರಿಸುತ್ತಾರೋ ಕಾದು ನೋಡಬೇಕಾಗಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

59 minutes ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 hour ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 hour ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

6 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago