ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ :
ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯರಾದ ಚೂಡಾಮಣಿ ರವರ ನಿಧನಕ್ಕೆ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಸಾಗರ- ಹೊಸನಗರ ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ , ಮುಖಂಡರಾದ ಕಗ್ಗಲಿ ಲಿಂಗಪ್ಪ,ಬೆಳ್ಳೂರು ತಿಮ್ಮಪ್ಪ ,ಸುಧೀಂದ್ರ ಪೂಜಾರಿ,ಕೃಷ್ಣಮೂರ್ತಿ ಬೆಳ್ಳಿಸರ ,ಉಮೇಶ್ ಜಾಗದ್ದೆ ,ಕಲ್ಲೂರು ನಾಗೇಂದ್ರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…