ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ತುಂಗಾ ಕಾಲುವೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಗೋಳಿಡುತ್ತಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ 5 ದಿನವಾದ್ರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 5 ದಿನ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಾಸಕ ರೇಣುಕಾಚಾರ್ಯ ಅವರು, ಚಂದ್ರಶೇಖರ್ ನಾಪತ್ತೆಯಾಗಿಲ್ಲ. ಅವನನ್ನು ಅಪಹರಣ ಮಾಡಲಾಗಿದೆ. ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್ ಎಂಬುದು ಖಚಿತ. ಅಪಹರಣದ ಮಾಹಿತಿಗಳು ನನಗೆ ಬರುತ್ತಿವೆ. ಚಂದ್ರಶೇಖರ್ ನಾಪತ್ತೆಯಾಗಿ ಇಂದಿಗೆ 5 ದಿನಗಳು ಕಳೆದಿವೆ. ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಉದ್ದೇಶಪೂರ್ವಕವಾಗಿಯೇ ಚಂದ್ರಶೇಖರ್ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್