ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested

ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ.



ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು.



ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ.

ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ ಕಾಪು ನಿವಾಸಿ ಜಾಹಿದ್ ಸಿನಾನ್(32) ಬಂಧಿತ ಆರೋಪಿಗಳಾಗಿದ್ದಾರೆ.

ಉಡುಪಿ ಜಿಲ್ಲೆಯ ಪೊಲೀಸ್ ಪ್ರಕಟಣೆ :

ಉಡುಪಿ ಜಿಲ್ಲೆಯಲ್ಲಿ ಕಳೆದ 5-6 ತಿಂಗಳಿನಿಂದ ರಾತ್ರಿ ಸಮಯ ಶಾಲಾ- ಕಾಲೇಜುಗಳಿಗೆ ನುಗ್ಗಿ ಬೀಗ ಮುರಿದು  ಹಣ ಹಾಗೂ ಬೆಲೆಬಾಳುವ ಸೊತ್ತುಗಳು ಕಳ್ಳತನವಾಗಿರುವ ಬಗ್ಗೆ ಸರಣಿ ಪ್ರಕರಣಗಳು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಆರೋಪಿಗಳ ಪತ್ತೆಗೆ ಎಲ್ಲ ಶಾಲಾ ಕಾಲೇಜುಗಳ ಮಾಹಿತಿ , ಅಪರಾಧ ನಡೆದ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ಆಧರಿಸಿ, ಸಿಸಿ ಕ್ಯಾಮೇರಾಗಳ ಪರಿಶೀಲನೆ, ಲಾಡ್ಜ್ ಪರಿಶೀಲನೆ, ಜೈಲಿನಿಂದ ಬಿಡುಗಡೆಯಾದ ಕಳ್ಳತನ ಪ್ರಕರಣದ ಆರೋಪಿಗಳ ಮಾಹಿತಿ, ತಾಂತ್ರಿಕ ಮಾಹಿತಿಯನ್ನು ಕಲೆಹಾಕಿ.  ಹೊರ ರಾಜ್ಯ ಹಾಗೂ ಹೊರ ಜಿಲ್ಲೆ ಯಿಂದ ಬರುವ  ವ್ಯಕ್ತಿಗಳು ಹಾಗೂ ವಾಹನದ ಮಾಹಿತಿ  ಬಗ್ಗೆ ನಿಗಾವಹಿಸಿದ್ದರು.

ಈ ದಿನ ದಿನಾಂಕ 21/11/2022 ರಂದು ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ

1. ಕುಮಾರಸ್ವಾಮಿ (59) ತಂದೆ ಮುರಗೇಶ ವಾಸ ಕಲ್ಲುಕುಡಚೀ,  ಸೇಲಂ, ತಮಿಳುನಾಡು ವಿಚಾರಿಸಲಾಗಿ ಈತನ  ಮೇಲೆ ಈ ಹಿಂದೆ ಭಟ್ಕಳ ನಗರ ಠಾಣೆಯಲ್ಲಿ 5 ಮನೆ ಕಳ್ಳತನ ಪ್ರಕರಣ, ಹೊನ್ನಾವರ ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣ ಹಾಸನ ಜಿಲ್ಲೆ ಬೇಲೂರು ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣದಲ್ಲಿ ಹಳೆ ಆರೋಪಿಯಾಗಿದ್ದು .ಸದ್ರಿ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟು  2014 ರಿಂದ 2021 ರವರೆಗೆ  ಸುಮಾರು 7 ವರ್ಷಗಳ ಕಾಲ ಕಾರವಾರ  ಜೈಲ್ ನಲ್ಲಿದ್ದು ಶಿಕ್ಷೆಯನ್ನು ಅನುಭವಿಸಿರುತ್ತಾನೆ.

2. ಜಾಹೀದ ಸಿನಾನ್ (32) ತಂದೆ: ಮಹಮ್ಮದ್, ವಾಸ 525(ಎ), ಹೆಚ್ ಕೆ ಮಂಜೀಲ್, ಎಸ್.ಎಸ್ ರೋಡ್ ಹೆಜಮಾಡಿ ಗ್ರಾಮ, ಕಾಪು ತಾಲೂಕು ಉಡುಪಿ ನಿವಾಸಿಯಾಗಿರುತ್ತಾನೆ.ಈತನು ಕಳ್ಳತನ ನಡೆಸಲು ಸಂತೆಕಟ್ಟೆ ಉಡುಪಿ ಬಳಿ ಬಾಡಿಗೆ ಮನೆಯನ್ನು ಮಾಡಿಕೊಂಡಿದ್ದು ಇನ್ನೊಬ್ಬ ತಮಿಳುನಾಡಿನ  ಆರೋಪಿ ಕುಮಾರ ಸ್ವಾಮಿಯನ್ನು ಕರೆಯಿಸಿಕೊಂಡು ಕಳ್ಳತನವನ್ನು ಮಾಡುತ್ತಿದ್ದನು.
ಕುಮಾರಸ್ವಾಮಿ 2021ರಲ್ಲಿಕಾರವಾರ ಜೈಲಿನಿಂದ ಬಿಡುಗಡೆಯಾದ ನಂತರ ಹೆಜಮಾಡಿಯ ಜಾಹೀದ್ ಸಿನಾನ್ ಜೊತೆ ಸೇರಿ ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 37 ಕಡೆ ರಾತ್ರಿ ಸಮಯ ಶಾಲಾ- ಕಾಲೇಜಿನ ಬೀಗ ಮುರಿದು ಕಳ್ಳತನ ಮಾಡಿರುತ್ತಾರೆ.


ಈ ಕುಖ್ಯಾತ ಕಳ್ಳರು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ಸರಹದ್ದಿನಲ್ಲಿ ಒಟ್ಟು 27 ಕಡೆ ಶಾಲಾ ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀಥಹಳ್ಳಿ, ಹೊಸನಗರ,ರಿಪ್ಪನಪೇಟೆ,ನಗರ ಠಾಣೆಗಳಲ್ಲಿ 6 ಪ್ರಕರಣ,  ಉತ್ತರ ಕನ್ನಡ ಜಿಲ್ಲೆಯ ಮುಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿ ಈ ಮೇಲಿನ  ಎಲ್ಲ ಪ್ರಕರಣಗಳನ್ನು ಭೇದಿಸಿರುತ್ತಾರೆ. ಈ ಆರೋಪಿಗಳಿಂದ  1 ಬೈಕು  2 ಮೊಬೈಲ್ ಪೋನ್  ಹಾಗೂ 10,000 ನಗದನ್ನು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ.


               ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಕ್ಷಯ ಎಂ. ಹೆಚ್  ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್ .ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ ಸುಧಾಕರ ಎಸ್ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಅನಂತ ಪದ್ಮನಾಭ, ಸಿ.ಪಿ.ಐ  ಬ್ರಹ್ಮಾವರ,  ಕೋಟ ಠಾಣೆಯ ಪಿ.ಎಸ್.ಐ  ಮಧು ಬಿ.ಇ, ಕೋಟ  ಠಾಣೆಯ ತನಿಖಾ ವಿಭಾಗದ  ಪಿ.ಎಸ್‌‌‌‌‌‌.ಐ , ಪುಷ್ಪಾ, ಪ್ರೊ. ಪಿ.ಎಸ್‌‌‌‌.ಐ. ನೂತನ್ ಡಿ. ಈ , ಕೋಟ ಪೊಲೀಸ್ ಠಾಣಾ ಎ.ಎಸ್‌‌‌‌.ಐ. ರವಿ ಕುಮಾರ್‌‌‌, ಸಿಬ್ಬಂದಿಯವರಾದ ರಾಘವೇಂದ್ರ, ರಾಘವೇಂದ್ರ ಶೆಟ್ಟಿ ಪ್ರಸನ್ನ, ಮೋಹನ್ ಕೊತ್ವಾಲ್, ವಿಜೆಯೇಂದ್ರ ಮತ್ತು  ಬ್ರಹ್ಮಾವರ ವೃತ್ತ ಕಛೇರಿಯ ಪ್ರದೀಪ ನಾಯಕ  ಹಾಗೂ  ಪೊಲೀಸ್ ಅಧೀಕ್ಷಕರ ಕಛೇರಿಯ ತಾಂತ್ರಿಕ ವಿಭಾಗದ ಶಿವಾನಂದ , ದಿನೇಶ , ನಿತಿನ್  ರವರುಗಳು ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಪ್ರಕರಣವನ್ನು ಭೇದಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಕ್ಷಯ ಎಂ. ಹೆಚ್  ಐ.ಪಿ.ಎಸ್ ರವರು ತಂಡವನ್ನು ಅಭಿನಂದಿಸಿರುತ್ತಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago