Headlines

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.



ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ ಬೆಳೆಯುತ್ತಾನೆ. ಆಗ ಚುನಾವಣೆಗೆ ನಿಲ್ಲಬಹುದು, ಗೆಲ್ಲಬಹುದು. ನಾನು ಕಳೆದ ಚುನಾವಣೆಯಲ್ಲಿ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿಲ್ಲ ಎಂದು ಇದೇ ವೇಳೆ ಹೇಳಿದರು.



ಮಗಳು ರಾಜನಂದಿನಿ ಸಹ ಅರ್ಜಿ ಸಲ್ಲಿಕೆ ಮಾಡಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ಪಕ್ಷಕ್ಕೆ ದುಡಿಯುತ್ತಿದ್ದಾರೆ. ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದಾರೆ ಕಾಗೋಡು ತಿಮ್ಮಪ್ಪ ತಿಳಿಸಿದರು.

Leave a Reply

Your email address will not be published. Required fields are marked *