Headlines

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura

ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ :  ಬಿಜೆಪಿ ಪಕ್ಷದ…

Read More

ಕಾರು ಮತ್ತು ಬೈಕ್‌ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident

ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.  ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.  ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More