Headlines

ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet

ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು.   ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು‌ ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು‌…

Read More

ಸಿ ಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ|Accident

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಭದ್ರತೆ ಒದಗಿಸಲು ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ. ಮಸ್ಕಲ್ ಗ್ರಾಮದ ಮಂಜುಳಾ ಹಾಗೂ ಮಗ ಮನೋಜ್ ಗಾಯಾಳುಗಳು….

Read More

ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress

ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…

Read More

ನವೆಂಬರ್ ತಿಂಗಳಿನಲ್ಲಿ ಅನ್ಯಭಾಷೆಗಳ ವೈಭವೀಕರಣ ಸಲ್ಲ – ಮೆಣಸೆ ಆನಂದ್|Ripponpet

ನವೆಂಬರ್ ತಿಂಗಳಲ್ಲಿ ಅನ್ಯ ಭಾಷೆಗಳ ವೈಭವೀಕರಣ ಸಲ್ಲ ರಿಪ್ಪನ್‌ಪೇಟೆ : ಕನ್ನಡ ಕಲರವದ ತಿಂಗಳಾದ ನವೆಂಬರ್ ನಲ್ಲಿ ಕನ್ನಡದ ಕಂಪು ರಾಜ್ಯಾದ್ಯಂತ ಮೇಳೈಸುತ್ತಿರುತ್ತದೆ.ಇಂತಹ ಸಂಧರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಅನ್ಯ ಭಾಷೆಗಳ ವೈಭವಿಕರಿಸಿದರೆ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದಂತಾಗುತ್ತದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆನಂದ್ ಮೆಣಸೆ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೆಲ ಜಲ ಉಳಿವಿಗಾಗಿ ಹೋರಾಟ ಮಾಡುವುದು ಎಲ್ಲಾ ಕನ್ನಡ ಸಂಘಗಳ ಉದ್ದೇಶ. ಕಲಾ ಕೌಸ್ತುಭ…

Read More

ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested

ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು. ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ. ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

ರಿಪ್ಪನ್‌ಪೇಟೆಯಲ್ಲಿ ನ.25,26 ರಂದು ಕಲಾಕೌಸ್ತುಭ ಕನ್ನಡ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-ನ.27ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 29ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 25 ಮತ್ತು 26 ರಂದು ಭೂಫಾಳಂ ಸಭಾ ಭವನದಲ್ಲಿ ಹಾಗೂ ನವೆಂಬರ್ 27 ರಂದು ಸಂಜೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೇಗೌಡ ಕ್ರೀಡಾಂಗಣದಲ್ಲಿ “ಆಳ್ವಾಸ್‌ ಸಾಂಸ್ಕೃತಿಕ ವೈಭವ’’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಕಾರ್ಯದರ್ಶಿ ರವಿಚಂದ್ರ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಸಂಚಾಲಕ ಎನ್.ಸತೀಶ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 25…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ – ಓರ್ವ ವಶಕ್ಕೆ|Assault on doctor

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಯ ಕಡೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ ವ್ಯಕ್ತಿ ಮಮ್ತಕೀಮ್ ಎಂಬಾತನನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಆಯನೂರಿನ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಶೀದ್ (65) ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ನಂತರ ಅವರನ್ನು ಮತ್ತೆ ಮೆಗ್ಗಾನ್ ಗೆ ದಾಖಲಿಸಿದ್ದರು ಆದರೆ ಭಾನುವಾರ ರಾತ್ರಿ ಅಬ್ದುಲ್ ರಶೀದ್…

Read More

ತೀರ್ಥಹಳ್ಳಿ : ಶಾರೀಕ್ ಮನೆ ಸೇರಿದಂತೆ ನಾಲ್ಕು ಮನೆಗಳ ಮೇಲೆ ಪೊಲೀಸ್ ರೈಡ್|Manglore blast

ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಎಸೈಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ. ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಸಂಬಂಧಿಕರ  ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ  ಪೊಲೀಸರು…

Read More
Exit mobile version