Headlines

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ಖಾಸಗಿ ಬಸ್ ಚಾಲಕ – ನಿರ್ವಾಹಕರಿಗೆ ಸಮವಸ್ತ್ರ ಕಡ್ಡಾಯ – ಎಸ್ ಪಿ|Uniform

ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್‌ಟಿಒ ಗಂಗಾಧರ್‌ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್‌ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ…

Read More

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More