ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.




  ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ ಶುಕ್ರವಾರ ಈ ಘಟನೆ ಗ್ರಾಮಸ್ಥರ ಗಮನಕ್ಕೆ ಬಂದಿದೆ. ತಕ್ಷಣ ಎಚ್ಚೆತ್ತ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

 ಸಾಗರ ತಾಲ್ಲೂಕಿನಲ್ಲೇ ಅತ್ಯಂತ ಹಿರಿದಾದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪ್ರಸಕ್ತ 33ಕ್ಕಿಂತ ಹೆಚ್ಚಿನ ಮಕ್ಕಳು ಕಲಿಯುತ್ತಿವೆ. ಆದರೂ ಕಳೆದ ಮೂರು ವರ್ಷಗಳಿಂದ ಸಹಾಯಕರಿಲ್ಲದೆ ಶಿಕ್ಷಕಿ ಕೂಡ ಅಸಹಾಯಕರಾಗಿದ್ದಾರೆ. ಹಿಂದಿನ ಸಹಾಯಕರು ನಿವೃತ್ತರಾಗಿ ಮೂರು ವರ್ಷಗಳಿಗಿಂತ ಹೆಚ್ಚಾಗಿದೆ. ಅಂದಿನಿಂದಲೂ ಸ್ಥಳೀಯರು ಸಂಬಂಧ ಪಟ್ಟ ಇಲಾಖೆ ಮತ್ತು ಮಾನ್ಯ ಶಾಸಕರ ಗಮನಕ್ಕೂ ತರುತ್ತಲೇ ಬರುತ್ತಿದ್ದಾರೆ. ಆದರೆ ಇದುವರೆಗೂ ಪ್ರಯೋಜನ ಆಗಿಲ್ಲ.




 ಇಲ್ಲಿನ ಅಂಗನವಾಡಿಗೆ ಲಕ್ಕವಳ್ಳಿ ಸೇರಿದಂತೆ ಇಲ್ಲಿಂದ ಸುಮಾರು ಮೂರು ಕಿ. ಮೀ. ದೂರದ ಮೂಡಾಗಲು, ಕುರುಬರ ಜಡ್ಡುಗಳಿಂದ ಮಕ್ಕಳು ಬರುತ್ತಾರೆ. ಸ್ಥಳೀಯರಲ್ಲಿ ಕೃಷಿ, ಕೂಲಿ ಕಾರ್ಮಿಕರೇ ಜಾಸ್ತಿ ಇರುವುದರಿಂದ ಪ್ರತಿದಿನ ಅಂಗನವಾಡಿಗೆ ಕರೆತಂದು, ಕರೆದೊಯ್ಯುವುದು ಕಷ್ಟದಾಯಕ. ಹೀಗಾಗಿ ಹಲವು ಬಾರಿ ಸಂಬಂಧ ಪಟ್ಟ ಇಲಾಖೆ ಮತ್ತು ಮಾನ್ಯ ಶಾಸಕರ ಗಮನಕ್ಕೂ ತಂದಿದ್ದೇವೆ. ಆದರೆ ಏನೂ ಪ್ರಯೋಜನ ಆಗಿಲ್ಲ ಎನ್ನುವುದು ಪ್ರತಿಭಟನಾ ನಿರತರ ಅಳಲು.

 ಈ ನಡುವೆ ಗುರುವಾರ ಮಗುವಿಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಗ್ರಾಮಸ್ಥರೆಲ್ಲ ಆತಂಕದಿಂದ ಸ್ಥಳೀಯ ಆಡಳಿತದ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಎಚ್ಚೆತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೋಮೇಶ್ ಹಾಗೂ ಸದಸ್ಯೆ ನಾಗರತ್ನಮ್ಮ ಸ್ಥಳೀಯರೊಂದಿಗೆ ಸೇರಿ ನಿನ್ನೆ ಅಂಗನವಾಡಿ ಕೇಂದ್ರಕೆ ಬೀಗ ಹಾಕಿ ಸಂಬಂಧಪಟ್ಟವರ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.

 ಇಂತಹ ಘಟನೆ ಆಗಾಗ ಆಗುತ್ತಲೇ ಇವೆ. ಆದರೂ ಯಾರೂ ತಲೆ ಕೆಡಿಸಿಕೊಳ್ಳುತ್ತಲೇ ಇಲ್ಲ. ಅಂಗನವಾಡಿಗೆ ಹೊಲಸು ರಾಜಕೀಯ ಕಾರಣಕ್ಕಾಗಿಯೇ ಸಹಾಯಕರ ನೇಮಕಾವಾಗುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.

 ತಕ್ಷಣವೇ ಅಂಗನವಾಡಿಗೆ ಸಹಾಯಕರ ನೇಮಕ ಮಾಡಬೇಕು. ಇಲ್ಲದೆ ಹೋದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸೋಮೇಶ್ ಮತ್ತು ನಾಗರತ್ನ ಅವರುಗಳು ಎಚ್ಚರಿಸಿದ್ದಾರೆ.




 ಪ್ರತಿಭಟನೆಯಲ್ಲಿ ರೂಪೇಶ್, ಗಂಗಾಧರ್ ಗೌಡ, ದೀಪು, ಪುಟ್ಟರಾಜು ಗೌಡ ಮೊದಲದವರು ಉಪಸ್ಥಿತರಿದ್ದರು.

ವರದಿ : ಬಿ ಡಿ ರವಿ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

6 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

13 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago