ರಿಪ್ಪನ್ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು ಭಾಗ ಬೆಚ್ಚಿ ಬೀಳುವಂತಾಗಿದೆ, ಮಲೆನಾಡಿನ ಜೀವ ಬೆಳೆಗಳೆಂದೇ ಹೆಸಾರಾಗಿರುವ ಅಡಕೆ, ಭತ್ತದ ಕಟಾವಿಗೆ ಬಂದಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಈಗಾಗಲೇ ಅನೇಕರ ವರ್ಷದ ಕೂಳು ನೀರು ಪಾಲಾಗಿ ಅದನ್ನೇ ನಂಬಿ ಜೀವಿಸುವ ರೈತ ಕಂಗಾಲಾಗಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಮಲೆನಾಡಿಗೆ ಎಲೆ ಚುಕ್ಕಿ ರೋಗದಂತಹ ಗಂಭೀರ ಸಮಸ್ಯೆಯ ಬೆನ್ನಲ್ಲೇ ಇಂತದೊಂದು ಪರಿಸ್ಥಿತಿ ಎದುರಾಗಿ ಮಾನಸಿಕವಾಗಿ ಕುಗ್ಗಿರುವ ರೈತರಿಗೆ ಸರ್ಕಾರದ ನೆರವು ಅವಶ್ಯಕವಾಗಿದೆ.
ಅಡಿಕೆ ಸತತವಾಗಿ ಬೆಲೆ ಕುಸಿತದಿಂದಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ.ಈ ಭಾಗದ ವಾಣಿಜ್ಯ ಬೆಳೆ ಅಡಿಕೆಗೂ ಸಮಸ್ಯೆಯಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು.
ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಮತ್ತು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರು ಮಲೆನಾಡಿಗರ ಈ ಗಂಭೀರ ಸಮಸ್ಯೆಯನ್ನು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಹೊಸನಗರ ತಾಲ್ಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್