ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.




ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಸಾರಾಂಶ :

13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ ಹತ್ತಿರ ಅರಣ್ಯ ಪ್ರದೇಶದಲ್ಲಿ ಯತೀಶ ಮತ್ತು ಆತನ ಸ್ನೇಹಿತರು ಸೇರಿಕೊಂಡು ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾಗ ಸುಮಾರು 12 ಜನರು ಮುಖಕ್ಕೆ ಮಾಸ್ಕ್ ದರಿಸಿಕೊಂಡು ಬೈಕ್ ನಲ್ಲಿ ಬಂದು ಹುಟ್ಟಿದ ಹಬ್ಬವನ್ನು ಆಚರಿಸುತ್ತಿದ್ದ ಯುವಕರನ್ನು ಹೊಡೆದು ಹೆದರಿಸಿ ಇವರ ಬಳಿ ಇದ್ದ ನಗದು ಹಣವನ್ನು ಕಿತ್ತುಕೊಂಡು ಹೋದ ಬಗ್ಗೆ ದರೋಡೆ ಪ್ರಕರಣ ದಾಖಲಾಗಿತ್ತು.ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಯತೀಶ್ ಮೊಬೈಲ್ ಸೇರಿದಂತೆ ಹಲವು ಮೊಬೈಲ್ ಗಳನ್ನ ಕಿತ್ತುಕೊಂಡು ಹೊಗಿದ್ದರು.




ಸದರಿ ಪ್ರಕರಣದ ತನಿಖೆ ಕೈಗೊಂಡ ಪೊಲೀಸ್ ನಿರೀಕ್ಷಕರು, ಕುಂಸಿ ಪೊಲೀಸ್ ಠಾಣೆರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ದಿನಾಂಕಃ- 01-12-2022 ರಂದು ಸದರಿ ಪ್ರಕರಣದ ಆರೋಪಿತರನ್ನ ಪತ್ತೆಹಚ್ಚಿದ್ದಾರೆ.1) ಶಿವಮೊಗ್ಗ ಟ್ಯಾಂಕ್ ಮೊಲ್ಲಾದ ನಿವಾಸಿ ಶಫೀವುಲ್ಲಾ @ ಟ್ಯಾಂಕ್ ಮೊಹಲ್ಲಾ ಶಫಿ, 35 ವರ್ಷ,2) ಶೇಷಾದ್ರಿಪುರಂನ ಮಾರುತಿ @ ಕ್ಯಾಂಡಿ, 28 ವರ್ಷ 3) ಮೆಹದಿ ನಗರದ ಆವೇಜ್ ಅಲಿ(22) 4) ಬಸವನಗುಡಿ ಹೊನ್ನೇಶ ಪಿ. ಜಿ @ ಚಿನ್ನು(24) 5) ಬಸವನಗುಡಿಯ ಗಣೇಶ ಜಿ, 22 ವರ್ಷ, 6) ವಿನೋದ ಎಂ, 19 ವರ್ಷ, ಗಳನ್ನ ಬಂಧಿಸಲಾಗಿದೆ.




ಆರೋಪಿತರಿಂದ ರೂ 830/- ನಗದು ಹಣ, 05 ಮೊಬೈಲ್ ಫೋನ್ ಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಹಿಂದೆ ಆರೋಪಿತರೆಲ್ಲರೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇವರುಗಳ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.

ಇನ್ನುಳಿದ 6 ಜನ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿರುತ್ತದೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

9 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

10 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

14 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

14 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

14 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

14 hours ago