ಇದಕ್ಕೆ ಪೂರಕ ಎಂಬಂತೆ, ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.
ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು ಚಿರತೆ ಪ್ರಾಣ ಕಳೆದುಕೊಂಡಿದೆ. ಮಂಗಳವಾರ ಬೆಳಿಗ್ಗೆ ದನ ಹೊಡೆದುಕೊಂಡು ಹೋಗುವ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆಯವರು ಅದನ್ನ ರಕ್ಷಣೆ ಮಾಡುವುದರೊಳಗೆ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.
ಬಳಿಕ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಶವವನ್ನು ನ್ಯಾಯಾಲಯದ ಅನುಮತಿ ಪಡೆದು ದಹನ ಮಾಡಲಾಗಿದೆ. ಚಿರತೆ ಎಲ್ಲಿ ಉರುಳಿಗೆ ಸಿಲುಕಿದೆ ಎಂಬುದು ಪ್ರಶ್ನೆ ಉದ್ಭವಿಸಿದೆ. ಯಾರು ಕಾಡು ಪ್ರಾಣಿಗೆ ಉರುಳಿ ಹಾಕಿದ್ದಾರೆ ಎಂಬುದು ಸತ್ಯ ಹೊರಬರಬೇಕಿದೆ.
ಸ್ಥಳಕ್ಕೆ ಸಾಗರ ಎಸಿವ್ ಶ್ರೀಧರ್, ವಲಯ ಅರಣ್ಯಾಕಾರಿ ಅರವಿಂದ್, ಡಿವೈಆರ್ವ್ಒ ದೀಪಕ್ಸಿಂಗ್, ಸೋಮಶೇಖರ್, ಅಶೋಕ್, ಮುಬಾರಕ್ ಬಾಷಾ, ಗಾರ್ಡ್ಗಳಾದ ಬಸವರಾಜ, ಮಂಜುನಾಥ ಮಲ್ಲಾದೊರೆ, ಗ್ರಾಪಂ ಸದಸ್ಯ ಸುದರ್ಶನ ಹಾಜರಿದ್ದರು. ಚಿರತೆ ಸಾವು ಸಂಬಂಧ ಅರಣ್ಯ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್