ರಿಪ್ಪನ್ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಿಪ್ಪನ್ಪೇಟೆ, ಅರಸಾಳು, ಕೆಂಚನಾಲ, ಬಾಳೂರು, ಹರತಾಳು, ಬೆಳ್ಳೂರು, ಹೆದ್ದಾರಿಪುರ, ಅಮೃತ, ಚಿಕ್ಕಜೇನಿ, ಮಾರುತಿಪುರ, ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಗಳ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಎರಡೂ ದಿನದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಅಂಗನವಾಡಿ, ಆಶಾ, ಆರೋಗ್ಯ, ಶಿಕ್ಷಣ, ಗೃಹ, ಮೆಸ್ಕಾಂ, ಪತ್ರಿಕಾ ಮಾದ್ಯಮ, ಕಂದಾಯ ಇನ್ನಿತರ ಇಲಾಖೆಗಳೊಂದಿಗೆ ಕಲೆ, ಸಾಹಿತ್ಯ, ಸಾಂಸ್ಕೃತಿ, ಸಂಗೀತ, ಕ್ರೀಡೆ, ಹೋರಾಟ ಕ್ಷೇತ್ರದಲ್ಲಿ ಸಮಾಜದ ಇನ್ನಿತರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸುಮಾರು 700 ಜನರಿಗೆ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ ಗೌರವ ಸನ್ಮಾನ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಹಿನ್ನಲೆಯಲ್ಲಿ ಬರುವೆ ಶಾಲಾ ಮೈದಾನದಲ್ಲಿ ಭರದ ಸಿದ್ದತೆ ನಡೆಯುತ್ತಿದೆ.
ಹಾಸ್ಯ ಕಾರ್ಯಕ್ರಮದ ನಂತರ ಕಮಲಶಿಲೆ ತಂಡದವರಿಂದ ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್