ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು.

ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ ಹಿಂದುಳಿದ ಗ್ರಾಮಗಳನ್ನು ಸಾರ್ವಜನಿಕರು, ವಿವಿಧ ಸಂಘಟನೆಗಳು, ಸಂಘ-ಸಂಸ್ಥೆಗಳು ತಿಳಿಸಿದರೆ, ಆ ಎಲ್ಲ ಗ್ರಾಮಗಳಿಗೆ ಪತ್ರಕರ್ತರ ತಂಡ ಭೇಟಿ ನೀಡಿ ಮೂರು ಗ್ರಾಮಗಳನ್ನು ಅಂತಿಮಗೊಳಿಸಲಾಗುವುದು. ಆ ಮೂರು ಕುಗ್ರಾಮಗಳಲ್ಲಿ ಪತ್ರಕರ್ತರು ಒಂದು ದಿನ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಪ್ರಕಟಗೊಂಡ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಅಂತಿಮ ವರದಿಯನ್ನು ಸಿದ್ಧಗೊಳಿಸಿ ಆಯಾ ಗ್ರಾಮದ ವ್ಯಾಪ್ತಿಯ ಶಾಸಕರು, ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಗ್ರಾಮದ ಅಭಿವೃದ್ಧಿ ಕುರಿತು ಸಮಗ್ರ ವರದಿ ನೀಡಲಾಗುತ್ತದೆ. ಅಷ್ಟೇ ಅಲ್ಲದೆ, ಸರ್ಕಾರಕ್ಕೆ ವರದಿ ನೀಡಿದ ಬಳಿಕ ಅದರ ಪ್ರಗತಿ ಕುರಿತು ಸಂಘ ನಿರಂತರವಾಗಿ ಪ್ರಯತ್ನಿಸಲಿದೆ ಎಂದು ಮಾಹಿತಿ ನೀಡಿದರು.

 ಪತ್ರಕರ್ತರ ಸಂಘಟನೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜತೆಗೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಉದ್ದೇಶದಿಂದ ವರ್ಷ ಪೂರ್ತಿ ಮಾದಕ ವಸ್ತು ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕುಗ್ರಾಮಗಳನ್ನು ತಿಳಿಸಲು ಸಾವರ್ಜನಿಕರು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ (೯೧೦೮೮೨೫೪೫೪), ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ (೯೩೪೧೧೨೬೩೪೦) ಅವರನ್ನು ಸಂಪರ್ಕಿಸಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಖಜಾಂಚಿ ಶಿವಮೊಗ್ಗ ನಂದನ್ ಇದ್ದರು. 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

11 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

13 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

16 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

16 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

16 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

17 hours ago