ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು.
ಇಲ್ಲಿನ ಪ್ರೆಸ್ ಟ್ರಸ್ಟ್ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ ಹಿಂದುಳಿದ ಗ್ರಾಮಗಳನ್ನು ಸಾರ್ವಜನಿಕರು, ವಿವಿಧ ಸಂಘಟನೆಗಳು, ಸಂಘ-ಸಂಸ್ಥೆಗಳು ತಿಳಿಸಿದರೆ, ಆ ಎಲ್ಲ ಗ್ರಾಮಗಳಿಗೆ ಪತ್ರಕರ್ತರ ತಂಡ ಭೇಟಿ ನೀಡಿ ಮೂರು ಗ್ರಾಮಗಳನ್ನು ಅಂತಿಮಗೊಳಿಸಲಾಗುವುದು. ಆ ಮೂರು ಕುಗ್ರಾಮಗಳಲ್ಲಿ ಪತ್ರಕರ್ತರು ಒಂದು ದಿನ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಪ್ರಕಟಗೊಂಡ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಅಂತಿಮ ವರದಿಯನ್ನು ಸಿದ್ಧಗೊಳಿಸಿ ಆಯಾ ಗ್ರಾಮದ ವ್ಯಾಪ್ತಿಯ ಶಾಸಕರು, ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಗ್ರಾಮದ ಅಭಿವೃದ್ಧಿ ಕುರಿತು ಸಮಗ್ರ ವರದಿ ನೀಡಲಾಗುತ್ತದೆ. ಅಷ್ಟೇ ಅಲ್ಲದೆ, ಸರ್ಕಾರಕ್ಕೆ ವರದಿ ನೀಡಿದ ಬಳಿಕ ಅದರ ಪ್ರಗತಿ ಕುರಿತು ಸಂಘ ನಿರಂತರವಾಗಿ ಪ್ರಯತ್ನಿಸಲಿದೆ ಎಂದು ಮಾಹಿತಿ ನೀಡಿದರು.
ಪತ್ರಕರ್ತರ ಸಂಘಟನೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜತೆಗೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಉದ್ದೇಶದಿಂದ ವರ್ಷ ಪೂರ್ತಿ ಮಾದಕ ವಸ್ತು ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕುಗ್ರಾಮಗಳನ್ನು ತಿಳಿಸಲು ಸಾವರ್ಜನಿಕರು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ (೯೧೦೮೮೨೫೪೫೪), ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ (೯೩೪೧೧೨೬೩೪೦) ಅವರನ್ನು ಸಂಪರ್ಕಿಸಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಖಜಾಂಚಿ ಶಿವಮೊಗ್ಗ ನಂದನ್ ಇದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…