ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು.


ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್ ಸತೀಶ್, ಸುರೇಶ್ ಸಿಂಗ್ ,ಸುಧೀಂದ್ರ ಪೂಜಾರಿ ,ಪಿ ರಮೇಶ್ ,ನಾಗರತ್ನ್ ದೇವರಾಜ್ ,
ಪದ್ಮಾ ಸುರೇಶ್ ,ದೇವರಾಜ್ ಕೆರೆಹಳ್ಳಿ ,  ಉಮಾ ಸುರೇಶ್ ,ಸುಧೀರ್ ಪಿ ,ಯೋಗೆಂದ್ರಪ್ಪ ಗೌಡ ,ಚಿಪ್ಲಿ ರಾಘವೇಂದ್ರ ,ಶೈಲಾ ಆರ್ ಪ್ರಭು ಸೇರಿದಂತೆ ಇನ್ನಿತರರಿದ್ದರು.

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಸಂಭ್ರಮಾಚರಣೆ :


ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಗಳಿಸಿದ್ದಲ್ಲದೆ, 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸಿ ಅಧಿಕಾರದ ಗದ್ದುಗೆಯೇರಿದ್ದು ಹಾಗೂ ಗುಜರಾತ್ ಚುನಾವಣೆಯಲ್ಲಿ 5 ಕ್ಷೇತ್ರದಲ್ಲಿ ಜಯಬೇರಿ ಬಾರಿಸಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದ್ದಾರೆ.

ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಪಕ್ಷದ ಹೊಸನಗರ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ದೆಹಲಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ರಾಜಧಾನಿಯ ಜನರು ಬಹುಮತ ನೀಡಿದ್ದಾರೆ. ಆ ಮೂಲಕ ಪಕ್ಷದ ಆಡಳಿತಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.ಗುಜರಾತ್ ನಲ್ಲಿ ಕೇಜ್ರಿವಾಲರ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜನರು ಮತ ನೀಡಿದ್ದಾರೆ.ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ, ಇದು ಕರ್ನಾಟಕ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ತಾಲೂಕ್ ಉಪಾಧ್ಯಕ್ಷ ಹಸನಬ್ಬ , ಮುಖಂಡರಾದ ಸಂತೋಷ್ ,ಈಶ್ವರಪ್ಪ ಗೌಡ ,ರವಿ ಹಾಗೂ ಇನ್ನಿತರರಿದ್ದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ :


ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಜಯಬೇರಿ ಬಾರಿಸಿರುವ ಹಿನ್ನಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಪರವಾದ ಜಯಘೋಷಣೆಗಳನ್ನು ಹಾಕಿ ಹರ್ಷ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ರಿಪ್ಪನ್‌ಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಸೀಫ಼್ ಬಾಷಾಸಾಬ್ ಮುಖಂಡರಾದ ಈಶ್ವರಪ್ಪ ಗೌಡ ರವೀಂದ್ರ ಕೆರೆಹಳ್ಳಿ, ರಮೇಶ್ ಫ಼್ಯಾನ್ಸಿ ,ಚಿಗುರು ಶ್ರೀಧರ್,ಮಧುಸೂಧನ್ ,ಗಣಪತಿ,ಉಲ್ಲಾಸ್ ತೆಂಕೊಲ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 hour ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

17 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

17 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

18 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

23 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago