ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ.





ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ ಅಲುವಳ್ಳಿ ಬಳಿಯ ಅಡಿಕೆ ತೋಟದಲ್ಲಿ ರೈತನೋರ್ವ ಕಣ್ಣಾರೇ ಕಂಡು ಗಾಬರಿಯಿಂದ ಮನಗೆ ಓಡಿಬಂದ ಘಟನೆಯಿಂದಾಗಿ ಸುತ್ತಮುತ್ತಲಿನ ರೈತರನ್ನು ಕಂಗಾಲು ಮಾಡಿದ್ದು ತಮ್ಮ ಜಮೀನಿಗೆ ಹೋಗಿ ಬರಲು ಭಯಪಡುವ ಪರಿಸ್ಥಿತಿ ಎದುರಾಗಿದೆ.




ಇತ್ತೀಚೆಗೆ ಮುಗೂಡ್ತಿ ವಲಯ ವ್ಯಾಪ್ತಿಯಲ್ಲಿನ ಮಳವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತುಂಬು ಗಬ್ಬದ ಹಸುವೊಂದು ಬಲಿಯಾಗಿ ಹಸುವಿನ ಹೊಟ್ಟೆಯಲ್ಲಿನ ಕರುವನ್ನು ಸುಮಾರು ಕಿ.ಮೀ ದೂರು ಎಳೆದುಕೊಂಡು ಹೋಗಿ ಹಾಕಿರುವ ವಿಷಯ ಮಾಸುವ ಮುನ್ನವೇ ಅರಸಾಳು ವಲಯ ವ್ಯಾಪ್ತಿಯಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಲುವಳ್ಳಿ ಗ್ರಾಮದ ಗಾಳಿಬೈಲು ಮಜರೆ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು ಇಂದು ಪುನ: ಅಲುವಳ್ಳಿಯ ರೈತರ ಅಡಿಕೆ ತೋಟದಲ್ಲಿ ಪ್ರತ್ಯಕ್ಷವಾಗಿದೆ ಇದರಿಂದಾಗಿ ಕಣ್ಣಾರೆ ಕಂಡ ರೈತ ಪುಟ್ಟರಾಜು ತಾನು ನೋಡಿ ಗಾಬರಿಗೊಂಡು ಅತ್ತ ಇತ್ತ ನೋಡದೇ ತೋಟದಿಂದ ಓಡಿ ಮನೆಗೆ ಮರಳಿದೆ ಎಂದು ಮಾಧ್ಯಮದವರ ಬಳಿ ತನ್ನ ಮನದಾಳದ ನೋವಯನ್ನು ತೋಡಿಕೊಂಡರು.

ಅಲ್ಲಗೆಳದ ಇಲಾಖೆ :

-ಅಲುವಳ್ಳಿ ಬಳಿಯಲ್ಲಿನ ಅಡಿಕೆ ತೋಟದಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆ ಗುರುತಿನ ಬಗ್ಗೆ ರೈತರು ಪೋಟೋ ತಗೆದು ಇಲಾಖೆಯವರಿಗೆ ಕಳುಹಿಸಿದರೆ ಇದು ಚಿರತೆ ಹೆಜ್ಜೆಯಲ್ಲಿ ನಾಯಿಯ ಹೆಜ್ಕೆ ಗುರುತು ಎಂದು ಅಲ್ಲಗೆಳೆದಿದ್ದು ಈ ಬಗ್ಗೆ ಗ್ರಾಮಸ್ಥರಲ್ಲಿ ಅತಂಕ ಮನೆಮಾಡಿದಂತಾಗಿದ್ದು ಮಾದಾಪುರ-ಕಮದೂರು,ಅಲವಳ್ಳಿ-ತೊಳೆಮದ್ದಲು ಕೊರಗಿ-ಮಸರೂರು ಮಾಣಿಕೆರೆ-ಹೊನ್ನಕೊಪ್ಪ-ಖೈರದವರ ಮನೆ  ಇನ್ನಿತರ ಗ್ರಾಮಗಳಿಂದ ನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜ್‌ಗಳಿಗೆ ಸೈಕಲ್ ಬೈಕ್ ಹಾಗೂ ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಚಿರತೆ ಕಾಟದಿಂದಾಗಿ ಮಕ್ಕಳು ಪೋಷಕ ವರ್ಗ ಚಿಂತಿಸುವಂತಾಗಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

11 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

11 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

13 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago