ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ.




ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ ಜೋರಾಗಿತ್ತು. ಈ ನಡುವೆ ಕೆಲವರು ರೋಹಿತ್‌ ಚಕ್ರತೀರ್ಥ ಅವರ ಪರವಾಗಿಯೂ ತಮ್ಮ ವಾದ ಮಂಡನೆ ಮಾಡಿದ್ದರು.




ಈ ನಡುವೆ, ತೀರ್ಥಹಳ್ಳಿಯಲ್ಲಿರುವ ಕೊಪ್ಪ ವೃತ್ತದಲ್ಲಿರುವ ಕುವೆಂಪು ಪ್ರತಿಮೆ ಎದುರು ಕುವೆಂಪು ಅಭಿಮಾನಿಗಳು ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆಯೊಂದಿಗೆ ವಿವಿಧ ಸಂಘಟನೆಗಳ ಮುಖಂಡರು ವೃತ್ತದಲ್ಲಿ ಸೇರಿದ್ದರು. ಚಕ್ರತೀರ್ಥ ಗೋ ಬ್ಯಾಕ್ ಘೋಷಣೆ ಕೂಗಿದರು. ಈ ನಡುವೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಚದುರಿಸಿದರು.




ಇತ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಬೇಕಿದ್ದ ಮಾಜಿ ಶಾಸಕ ಕಡಿದಾಳ್ ದಿವಾಕರ್ ಅವರು ಸಭೆಗೆ ಗೈರಾಗಿದ್ದಾರೆ. ರೋಹಿತ್‌ ಚಕ್ರತೀರ್ಥ ಅವರನ್ನು ಬಿಗಿ ಭದ್ರತೆಯ ಮೂಲಕ ಸಭಾ ವೇದಿಕೆಗೆ ಕರೆದೊಯ್ಯಲಾಯಿತು.

ಪಠ್ಯಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಾರಾಯಣಗುರು ಸೇರಿದಂತೆ ಹಲವರು ಮಹನೀಯರಿಗೆ ಅವಮಾನ ಮಾಡಲಾಗಿದೆ ಎಂಬ ಆಕ್ರೋಶವೂ ವ್ಯಕ್ತವಾಗಿತ್ತು. ಇದೇ ಕಾರಣಕ್ಕೆ ತೀರ್ಥಹಳ್ಳಿಯ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರವರು ಬರುವುದು ಬೇಡ ಎಂಬ ಆಕ್ರೋಶ ವ್ಯಕ್ತವಾಗಿತ್ತು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

7 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

9 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

12 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

13 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

13 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

13 hours ago