ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ.
ಪಾರ್ಕಿಂಗ್ ನೋಡಿಕೊಳ್ಳುವ ವ್ಯಕ್ತಿ ಪೊಲೀಸ್ ಮತ್ತು ಅಗ್ನಿಶಾಮಕ ದಳ ಸ್ಣತಳಕ್ಕೆ ವಿಷಯ ತಿಳಿಸಿದ್ದಾರೆ. ಪಾರ್ಕಿಂಗ್ ನವರಿಗೆ ದಿಬ್ಬಯ್ಯ ಪರಿಚಯವಿದ್ದರಿಂದ ಆತನ ಕುಟುಂಬಕ್ಕೆ ತಿಳಿಸಿದ್ದಾರೆ. ದಿಬ್ಬಯ್ಯನವರಿಗೆ ಇಬ್ಬರು ಮಕ್ಕಳಿದ್ದಾರೆ. ಸ್ಥಳಕ್ಕೆ ಬಂದ ಮಕ್ಕಳು ಅಪ್ಪನನ್ನ ನೆನೆದು ಕಣ್ಣೀರಿಟ್ಟಿದ್ದಾರೆ.
ದಿಬ್ಬಯ್ಯ ಪಾಲಿಕೆಯ ಖಾಯಂ ಪೌರಕಾರ್ಮಿಕರಾಗಿದ್ದಾರೆ. ಅಗ್ನಿಶಾಮಕ ದಳ ಬಾವಿಗೆ ಬಿದ್ದ ಮೃತ ದೇಹವನ್ನ ಮೇಲೆತ್ತಿದೆ. ನೀರಿನಲ್ಲಿದ್ದ ಕಾರಣ ಮುಖವೆಲ್ಲಾ ಬಾತುಕೊಂಡು ಕೊಳೆಯುವ ಸ್ಥಿತಿ ತಲುಪಿದೆ. ಕುತ್ತಿಗೆ ಬಳಿ ರಕ್ತ ಕಾಣಿಸಿಕೊಂಡಿದೆ ಚರ್ಮವೆಲ್ಲಾ ಬಿಳಿಚಿಕೊಂಡಿದೆ.
ಆತನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್