ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ.
ದಿಬ್ಬಯ್ಯ ಪಾಲಿಕೆಯ ಖಾಯಂ ಪೌರಕಾರ್ಮಿಕರಾಗಿದ್ದಾರೆ. ಅಗ್ನಿಶಾಮಕ ದಳ ಬಾವಿಗೆ ಬಿದ್ದ ಮೃತ ದೇಹವನ್ನ ಮೇಲೆತ್ತಿದೆ. ನೀರಿನಲ್ಲಿದ್ದ ಕಾರಣ ಮುಖವೆಲ್ಲಾ ಬಾತುಕೊಂಡು ಕೊಳೆಯುವ ಸ್ಥಿತಿ ತಲುಪಿದೆ. ಕುತ್ತಿಗೆ ಬಳಿ ರಕ್ತ ಕಾಣಿಸಿಕೊಂಡಿದೆ ಚರ್ಮವೆಲ್ಲಾ ಬಿಳಿಚಿಕೊಂಡಿದೆ.
ಆತನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…