ರಿಪ್ಪನ್ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
ಬ್ರಾಹ್ಮಣ ಸಮುದಾಯ ಸ್ವಂತ ಶಕ್ತಿ,ಬುದ್ದಿವಂತಿಕೆ ಹಾಗೂ ದೂರ ದೃಷ್ಟಿಯಿಂದ ದೇಶಕ್ಕೋಸ್ಕರ ನಾನಾ ಕೊಡುಗೆಗಳನ್ನು ನೀಡಿದೆ.ಬ್ರಾಹ್ಮಣರು ಭಾರತ ದೇಶದಲ್ಲಿ ಸಂಖ್ಯಾ ಬಲದಲ್ಲಿ ಅಲ್ಪಸಂಖ್ಯಾತರು ಬುದ್ದಿವಂತಿಕೆ ಮತ್ತು ಪ್ರತಿಭೆಯಲ್ಲಿ ಬಹುಸಂಖ್ಯಾತರು ಎಂದರು.
ಬ್ರಾಹ್ಮಣ ಮಹಿಳಾ ಸಮಾಜದ ಪ್ರಮುಖರಾದ ಪದ್ಮಾ ಸುರೇಶ್ ಸಮುದಾಯ ಭವನಕ್ಕೆ ಬೋರ್ ವೆಲ್ ಅವಶ್ಯಕತೆ ಇರುವ ಬಗ್ಗೆ ಶಾಸಕರ ಗಮನ ಸೆಳೆದಾಗ ತಕ್ಷಣ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ ಕೆಲವೇ ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು ಭರವಸೆ ನೀಡಿದರು.
ಬ್ರಾಹ್ಮಣ ಸಮಾಜದ ಅಧ್ಯಕ್ಷ ಹೆಚ್.ಪಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ,ಸವಿತಾ ರಾಧಕೃಷ್ಣ,ಸೌಮ್ಯ ಅರುಣ್ ಕುಮಾರ್ ,ಸರಸ್ವತಿ ಪ್ರೇಮಚಂದ್ರ, ಶಿವಾನಂದ,ಗಣಪತಿ ಪುರಾಣಿಕ್ ,ಮಾನಸ ಪುರುಷೋತ್ತಮ್ ,ಉಮಾ ಸುರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಅಮಿತಾ ಬಲ್ಲಾಳ್ ಸ್ವಾಗತಿಸಿ, ಪದ್ಮಾಸುರೇಶ್ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್