ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds

ಹೊಸನಗರ : ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು.





ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್  ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳ ನೇಮಕವನ್ನು ಬೂತ್ ಮಟ್ಟದಲ್ಲಿ ರಚಿಸಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷ ಸೇರಲು ಜಿಲ್ಲೆಯ ಯುವ ಸಮೂಹ ಈಗಾಗಲೇ ತಂಡಗಳನ್ನು ರಚಿಸಿಕೊಂಡಿದ್ದು ರಾಜ್ಯಾಧ್ಯಕ್ಷರ ಭೇಟಿ ನಂತರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠಗೊಳ್ಳಲಿದೆ ಎಂದರು.

ರಾಜ್ಯ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮಾತನಾಡಿ  ನಮ್ಮ ಕಾರ್ಯಕರ್ತರುಗಳು ಕುಮಾರಸ್ವಾಮಿಯವರು ಮಾಡಿರುವ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರನ್ನು ಸಂಪರ್ಕಿಸಿ 1ಬಾರಿ ಜೆಡಿಎಸ್ ಗೆ ಬೆಂಬಲಿಸುವಂತೆ ಮನವಿ ಮಾಡಬೇಕು,ಈ ಬಾರಿ ಜೆಡಿಎಸ್ ಕಾರ್ಯಕರ್ತರು ಅತಿ ಶ್ರಮವಹಿಸಿ ಕುಮಾರಸ್ವಾಮಿಯವರು 2023 ರಲ್ಲಿ  ಈ ರಾಜ್ಯದ ಮುಖ್ಯಮಂತ್ರಿಯಾಗುವ ಸನ್ನಿವೇಶಕ್ಕೆ ಸಾಕ್ಷಿಯಾಗಬೇಕು,




ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದು ಈಗಲೂ ಕೂಡ ಪಕ್ಷದ ಪರ ಒಲವು ಹೊಂದಿದ್ದಾರೆ,ಮುಖಂಡರು ಹಾಗೂ ಕಾರ್ಯಕರ್ತರ ನಡುವಿನ ಸಂವಹನ ಕೊರತೆಯಿಂದ ಪಕ್ಷದ ಸಂಘಟನೆಯಲ್ಲಿ ಹಿನ್ನಡೆಯಾಗಿತ್ತು ಈಗ ತೀರ್ಥಹಳ್ಳಿ ಕ್ಷೇತ್ರದ ಯುವ ನಾಯಕ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಘೋಷಿತ ಅಭ್ಯರ್ಥಿ ಯಡೂರು ರಾಜಾರಾಮ್ ಅವರ ಸಂಘಟನಾ ಚತುರತೆಯಿಂದ ಚದುರಿಹೋಗಿದ್ದ ಪಕ್ಷದ ಹಳೆಯ ಕಾರ್ಯಕರ್ತರನ್ನು ಮತ್ತೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷಕ್ಕೆ ಹಿಂತಿರುಗುತ್ತಿದ್ದು ಮುಂದಿನ ದಿನಗಳಲ್ಲಿ ತೀರ್ಥಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.


ತಾಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಅಧ್ಯಕ್ಷತೆ ವಹಿಸಿದ್ದರು.

ಈ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ನರಸಿಂಹ ಗಂಧದ ಮನೆ, ಜಿಲ್ಲಾ ಎಸ್ಸಿ ಎಸ್ಟಿ ಮಹಿಳಾ ಘಟಕದ ಅಧ್ಯಕ್ಷ ಉಷಾ ನಾಯಕ್, ಗೀತಾ ಸತೀಶ್, ದಿವ್ಯ ಪ್ರವೀಣ್, ಸುಮತಿ ಪೂಜಾರಿ, ಲಕ್ಷ್ಮಿ ರೇಖಾ, ಹೆಚ್ ಪಾಲಾಕ್ಷ, ನಾಗರಾಜ ಕಂಕಾರಿ, ಭಾಸ್ಕರ, ಪ್ರಸನ್ನ ಶಾಮ್,  , ನವಲೆ ಮಂಜುನಾಥ್ , ಬಸವರಾಜ್ , ದಿವಾಕರ , ರಮಾನಂದ, ಫಾರೂಕ್, ಚಂದ್ರಪ್ಪ, ಜಯರಾಮ ಶೆಟ್ಟಿ, ಈರಣ್ಣ, ನಾಗೇಶ್, ಹೆಚ್ ಆರ್ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

10 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

11 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

14 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

15 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

15 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

15 hours ago