ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.




ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು.


ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಜಿಯವರ ಟೀಸರ್ ಪ್ರದರ್ಶ ಮಾಡಲಾಯಿತು.

ಜಡೆ ಮಠದ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿ ಅಶಿರ್ವಚನ ನೀಡಿ ಹಾನಗಲ್ ಕುಮಾರ ಶಿವಯೋಗಿಗಳು ೧೨೦ ವರ್ಷಗಳ ಹಿಂದೆ ಅಖಿಲ ಭಾರತ ವೀರಶೈವ ಲಿಂಗಾಯಿತಮಹಾಸಭಾವನ್ನು ಸ್ಥಾಪನೆ ಮಾಡಿ ಸಮಾಜದ ಎಲ್ಲರನ್ನು ಒಂದು ಗೂಡಿಸಿ ಮಹಾನ್ ಚೇತನ-ಪೂಜ್ಯರು ಅರೋಗ್ಯ ಪೂರ್ಣ ಸಮಾಜ ನಿರ್ಮಿಸುವ ಮಹದಾಸೆಹೊಂದಿ ಅಂಧರಿಗೆ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಅಧ್ಯತೆ ನೀಡಿ ಲಿಂಗಾಯತರು ಧರಿಸುವ ಭಸ್ಮ ಘಟಕವನ್ನು ಸ್ಥಾಪನೆ ಮಾಡಿ ಸ್ವಾವಲಂಭಿ ಬದುಕಿಗೆ ನಾಂದಿಯಾದರು ಎಂದರು.




ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವರ ಮಹಾಸ್ವಾಮಿಜಿ ಉಪದೇಶಾಮೃತ ನೀಡಿ ಸಮಾಜದ ಒಳಿತಿಗೆ ಹಾನಗಲ್ ಕುಮಾರೇಶ್ವರ ಸ್ವಾಮಿಗಳ ಕೊಡುಗೆ ಅಗಾಧ ವಾಗಿದೆ.ಸಮಾಜಕ್ಕೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದವರು ಇವರು ಸಮುದಾಯದ ಜನರಿಗೆ ಶತಮಾನಗಳ ಹಿಂದೆ ಜ್ಞಾನದ ಅರಿವು ಕಲಿಸಿದ ಕೀರ್ತಿ ಸಹ ಇವರಿಗೆ ಸಲ್ಲಬೇಕು.ಗುರು ವಿರಕ್ತ ಮಠಾಧೀಶರಿಗೆ ಸಂಸ್ಕೃತ ವೇದ ಅಧ್ಯಯನ ಮತ್ತು ಪೂಜಾ ವಿಧಿ ವಿಧಾನವನ್ನು ಕಲಿಸುವ ವಿಶ್ವವಿದ್ಯಾಲಯವೇ ಶ್ರೀ ಗುರುಕುಮಾರೇಶ್ವರ ಮಹಾಸ್ವಾಮಿಜಿಯವರದ್ದಾಗಿದೆ ಎಂದರು.

ಈ ಸಂಧರ್ಭದಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರಾದ ಆರ್.ಎ.ಚಾಬುಸಾಬ್,ಎಂ.ಬಿ.ಮಂಜುನಾಥ ಎನ್.ವರ್ತೇಶ್, ಎಂ.ಡಿ.ಇಂದಿರಮ್ಮ ಜಿ.ಎಸ್.ಚಂದ್ರಪ್ಪ,ಬೆಳಕೋಡು ಹಾಲಸ್ವಾಮಿ,, ಹೆಚ್.ವಿ.ಈಶ್ವರಪ್ಪಗೌಡ,ಬಿ.ಹೆಚ್.ಸ್ವಾಮಿಗೌಡ ಬೆಳಂದೂರು,ಲೀಲಾ ಶಂಕರ್,ತೀರ್ಥೇಶ್ ಹಾಗೂ ಇತರರು ಇದ್ದರು.

ರಾಜು ದೂನ ಸ್ವಾಗತಿಸಿದರು.ಕಗ್ಗಲಿ ಶಿವಪ್ರಕಾಶ್ ಪಾಟೀಲ್ ವಂದಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

12 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago