ರಿಪ್ಪನ್ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು.
ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಈ ಕಾಮಗಾರಿ ಉದ್ಘಾಟನೆಯ ಸಮಯದಲ್ಲಿ ಪ್ಲೆಕ್ಸ್ ಅಳವಡಿಕೆಯಲ್ಲಿ ಅವರಿಬ್ಬರ ಭಾವಚಿತ್ರ ಹಾಗೂ ಶಾಸಕರ ಭಾವಚಿತ್ರವನ್ನು ಗ್ರಾಮ ಪಂಚಾಯ್ತಿ ಹೆಸರಿನಲ್ಲಿ ಹಾಕಿ ನನ್ನನ್ನು ಕಡೆಗಣಿಸಿದ್ದಾರೆಂದು ಈ ಬಗ್ಗೆ ಪಿಡಿಓ ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಕೇತಾರ್ಜಿರಾವ್ ಕ್ಷಮೆಯಾಚಿಸಬೇಕು ಮತ್ತು ಇನ್ನೂ ಮುಂದೆ ಇಂತಹ ಘಟನೆಗಳು ಅಗದಂತೆ ಎಚ್ಚರ ವಹಿಸಬೇಕು ಎಂದು ಮೌನಪ್ರತಿಭಟನೆಯನ್ನು ನಡೆಸುತ್ತಿರುವುದಾಗಿ ಮಾಧ್ಯಮದವರಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಗಣಪತಿ, ಡಿ.ಈ.ಮಧುಸೂದನ್,ಧನಲಕ್ಷಿö್ಮ,ಅಶೀಫ್,ಸಾರಾಭಿ,ಪ್ರಕಾಶ್ ಪಾಲೇಕರ್ ಎನ್.ಚಂದ್ರೇಶ್, ಹಾಗೂ ಜನಜಾಗೃತಿ ವೇದಿಕೆ ಅಧ್ಯಕ್ಷ ಟಿ ಆರ್ ಕೃಷ್ಣಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಕಾರರ ಮನವೊಲಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ರವರು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಸಂಭವಿಸಿದ ಹಾಗೆ ಗಮನಹರಿಸುವುದಾಗಿ ತಿಳಿಸಿದರ ಹಿನ್ನೆಲೆಯಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತಗೆದುಕೊಂಡರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್