ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ.




ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ ಪುತ್ರನಾದ ಪ್ರೀತಮ್ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತಿದ್ದಾನೆ.ಈತನಿಗೆ ಈತನ ತಂದೆಯಾದ ಭೀಮರಾಜ್  ತರಬೇತಿ ನೀಡಿದ್ದಾರೆ.




ಅರಸಾಳು ಸಮೀಪದ ಕೊಳವಂಕ ನಿವಾಸಿ ನಾರಾಯಣಪ್ಪ ಮತ್ತು ಯಶೋಧ ದಂಪತಿಗಳ ಪುತ್ರನಾದ ಗಣೇಶ್ ಕೆ ಎನ್ ಪಟ್ಟಣದ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತಿದ್ದಾರೆ.

ಬಡತನದ ಬೇಗೆಯಿಂದ ಬಳಲುತ್ತಿರುವ ಈ ಮಕ್ಕಳಿಗೆ ಉತ್ತಮ ಪ್ರತಿಭೆ ಇದ್ದು ಮಕ್ಕಳ ಪ್ರತಿಭೆಯನ್ನು ಮತ್ತಷ್ಟು ಉತ್ತಮಪಡಿಸಿ ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ದಿಸೆಯಲ್ಲಿ ಇವರಿಗೆ ಸುಸಜ್ಜಿತ ಮೈದಾನ, ತರಬೇತಿ ಮತ್ತು ಪ್ರೋತ್ಸಾಹ ನೀಡಬೇಕಾಗಿದೆ.

ಉತ್ತಮ ದರ್ಜೆಯ ಜೆರ್ಸಿ, ಶೂ ,ನೀ ಕ್ಯಾಪ್ ಹಾಕಿಕೊಂಡು ಆಡುವ ಖಾಸಗಿ ಶಾಲೆಯ ಕ್ರೀಡಾಪಟುಗಳ ಎದುರು ಬರಿಗಾಲಿನಲ್ಲಿ ಆಟವಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವುದು ಸುಲಭದ ಮಾತಲ್ಲ….ಅಂತಹದನ್ನು ನಮ್ಮೂರಿನ ಯುವ ಪ್ರತಿಭೆಗಳು ಸಾಧಿಸಿ ತೋರಿಸಿವೆ.

ಕ್ರೀಡೆಗೆ ಬೇಕಾದ ಸೂಕ್ತ ಉಡುಪು, ಸಾಮಗ್ರಿಗಳು ಇಲ್ಲದೆ ಇರುವುದು ಈ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಾಗದೇ ಬಲಾಡ್ಯ ತಂಡಗಳ ಎದುರು ಉತ್ತಮ‌ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮೂರಿನ ಹೆಮ್ಮೆ.

ಮಲೆನಾಡಿನಲ್ಲಿಯೇ ವಾಲಿಬಾಲ್ ನ ತವರು ಎಂದೇ ಪ್ರಖ್ಯಾತವಾಗಿರುವ ರಿಪ್ಪನ್‌ಪೇಟೆಯಲ್ಲಿ ಅತ್ಯದ್ಭುತ ರೀತಿಯಲ್ಲಿ ವಾಲಿಬಾಲ್ ಪ್ರತಿಭೆಗಳು ಹೊರ ಹೊಮ್ಮುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.


ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಯುವ ಪ್ರತಿಭೆಗಳಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕಿ ಶೈಲಾ ಮತ್ತು ಹಿರಿಯ ವಾಲಿಬಾಲ್ ಕ್ರೀಡಾಪಟು ಉಮೇಶ್ ಹೆಚ್ ಎನ್ ಹಾಗೂ ಶಾಲಾಭಿವೃದ್ದಿ ಸಮಿತಿ ,ಶಿಕ್ಷಕ ವರ್ಗ ಹಾಗೂ ಸಂಘ ಸಂಸ್ಥೆಗಳು ಅಭಿನಂದಿಸಿದ್ದಾರೆ.




ಬಡ ಯುವ ಪ್ರತಿಭೆಗಳು ಮುಂದಿನ ದಿನಗಳಲ್ಲಿ ಸೂಕ್ತ ತರಬೇತಿ ದೊರೆತು ಉನ್ನತ ಮಟ್ಟದ ಕ್ರೀಡಾಪಟುಗಳಾಗಿ ಹೊರಹೊಮ್ಮಲಿ ಎಂಬುವುದೇ ಪೋಸ್ಟ್ ಮ್ಯಾನ್ ನ್ಯೂಸ್ ಸಂಸ್ಥೆಯ ಆಶಯ…..
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

3 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

20 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

21 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

22 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago