ರಿಪ್ಪನ್ಪೇಟೆ : ಇತ್ತೀಚಿನ ದಿನಗಳಲ್ಲಿ ಜನರಿಗೆ ನಾಯಿಗಳ ಮೇಲಿನ ಪ್ರೀತಿ ಹೆಚ್ಚಾಗ್ತಿದೆ. ಅದಕ್ಕಂತಲೇ ಅನೇಕ ಮಂದಿ ವಿವಿಧ ಜಾತಿಯ ನಾಯಿಗಳನ್ನು ಮನೆಗೆ ತಂದು ಸಾಕಲು ಮುಂದಾಗಿದ್ದಾರೆ. ಆದರೆ ಕೆಲ ಬಡಾವಣೆಯಲ್ಲಿರುವ ರಾಕ್ಷಸ ರೂಪದ ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಮನೆಯಿಂದ ಹೊರ ಕಳಿಸುವುದಕ್ಕೂ ಪೋಷಕರು ಭಯಪಡುವ ಕಾಲ ಬಂದಿದೆ.
ನಿನ್ನೆಯ ದಿನ ಭದ್ರಾವತಿಯಲ್ಲಿ ನಾಯಿ ದಾಳಿಗೆ ಮಗು ಸಾವನ್ನಪ್ಪಿದ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಇಂದು ನಾಲ್ಕು ವರ್ಷದ ಮಗು ಮೇಲೆ ನಾಯಿ ದಾಳಿ ನಡೆಸಿದೆ.ಅದೇ ತರಹದ ಪ್ರಕರಣವೊಂದು ಪಟ್ಟಣದಲ್ಲಿ ನಡೆದಿದ್ದು ಬೆಳಕಿಗೆ ಬಂದಿರಲಿಲ್ಲ.
. ( ಭದ್ರಾವತಿಯಲ್ಲಿ ಬೀದಿನಾಯಿ ದಾಳಿಗೆ ಮೃತಪಟ್ಟ ಮಗು)
ಕಳೆದ ನವೆಂಬರ್ 13 ರಂದು ಶಿವಮೊಗ್ಗ ರಸ್ತೆಯ ಬನ್ನಿ ನಗರದಲ್ಲಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿರುವ ವಿನಾಯಕ(8) ಶಾಲೆಗೆ ಬರುವಾಗ ಬೀದಿ ನಾಯಿಗಳು ದಾಳಿ ಮಾಡಿ ತೊಡೆ ಬಾಗವನ್ನು ಕಚ್ಚಿತ್ತು.ಆ ಬಾಲಕನಿಗೆ ಪಟ್ಟಣದ ಭೀಮರಾಜ್ ಮತ್ತು ಚಿಪ್ಲಿ ರಾಘವೇಂದ್ರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮಾಡಳಿತದ ಗಮನಕ್ಕೆ ತಂದಿದ್ದರು ಸಹ ಸರಿಯಾಗಿ ಸ್ಪಂದಿಸಿರಲ್ಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಪಟ್ಟಣದ ಕೆಲ ಬಡಾವಣೆಯ ಜನರು ರಾತ್ರಿ ವೇಳೆ ತಮ್ಮ ಮನೆಗಳಿಗೆ ನಿರ್ಭಯವಾಗಿ ತೆರಳೋದಕ್ಕೂ ಆತಂಕ ಪಡುವ ವಾತಾವರಣ ಸೃಷ್ಡಿಯಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಬೀದಿ ನಾಯಿಗಳ ಹಾವಳಿ.
ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು,ಮಹಿಳೆಯರು ಬೆಳಗಿನ ವಾಯುವಿಹಾರ ಹಾಗೂ ಸಂಜೆ ಸಂಧರ್ಭದಲ್ಲಿ ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ.
ಗ್ರಾಮಾಡಳಿತ ಕೇವಲ ಆದಾಯಕ್ಕಾಗಿ ಶ್ರಮಿಸದೇ ಅಲ್ಪವಾದರೂ ಜನಹಿತಕ್ಕೂ ಕಾರ್ಯನಿರ್ವಹಿಸುವ ಅಗತ್ಯತೆ ಇದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮಾಡಳಿತ ಎಚ್ಚೆತ್ತುಕೊಂಡು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್