ಅಲ್ಲದೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ನಿಯಮ ಸರಳೀಕರಿಸಿ ಮೂರು ತಲೆಮಾರು ಎಂದು ಇರುವುದನ್ನು ಕೈಬಿಟ್ಟು ಒಂದು ತಲೆಮಾರು ಎಂದು ಮಾಡಬೇಕು. ಈ ಕುರಿತು ಸದನವು ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು. ಇವರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡಿದರೆ ರಕ್ತ ಕ್ರಾಂತಿ ಆಗುತ್ತದೆ ಎಂದು ಅವರು ಎಚ್ಚರಿಸಿದರು.
ವಿಧಾನಸಭೆಯಲ್ಲಿ ಬುಧವಾರ ನಿಯಮ 69 ರಡಿ ಹರತಾಳು ಹಾಲಪ್ಪ ಮತ್ತು ದಿನಕರ ಶೆಟ್ಟಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ‘ಶರಾವತಿ ಸಂತ್ರಸ್ತರ ವಿಚಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಒಯ್ದು ಇತ್ಯರ್ಥಪಡಿಸುತ್ತೇವೆ. ಈ ವಿಚಾರವನ್ನು ನಮಗೆ ಬಿಡಿ’ ಎಂದು ಹೇಳಿದರು.
ಈ ಪ್ರಕರಣಗಳಲ್ಲಿ ಒತ್ತುವರಿದಾರರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿರುವುದರ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸಲಾಗುತ್ತಿದೆ. ಈ ನೋಟಿಸ್ ಒಕ್ಕಲೆಬ್ಬಿಸಲು ಅಲ್ಲ. ಅಲ್ಲಿ ವಾಸವಿರುವುದಕ್ಕೆ ದಾಖಲೆಗಳ ಪರಾಮರ್ಶೆಗೆ ಮಾತ್ರ. ಈ ರೀತಿ ಸಂಗ್ರಹಿಸಿದ ದಾಖಲೆಗಳು ವಿಭಾಗೀಯ ಅಧಿಕಾರಿಗೆ ಹೋಗುತ್ತದೆ. ಈ ನೋಟಿಸಿನ ಬಗ್ಗೆ ಭಯ ಬೇಕಿಲ್ಲ. ಅಪ ಪ್ರಚಾರಗಳಿಗೆ ಕಿವಿಗೊಡಬೇಕಾಗಿಲ್ಲ ಎಂದರು.
1980ರ ಅರಣ್ಯ ಕಾಯ್ದೆ ಜಾರಿಗೆ ಬಂದ ಮೇಲೆ ರಾಜ್ಯ ಸರ್ಕಾರ ಕೇಂದ್ರದ ಮತ್ತು ಸುಪ್ರೀಂಕೋರ್ಟ್ ಒಪ್ಪಿಗೆ ಪಡೆಯದೇ ಜಮೀನು ಡಿ-ನೋಟಿಫೈ ಮಾಡಿದ್ದನ್ನು ಹೈಕೋರ್ಟ್ ಒಪ್ಪಿಕೊಂಡಿಲ್ಲ. ಇದು ನ್ಯಾಯಾಂಗ ಉಲ್ಲಂಘನೆ ಆಗುವುದರಿಂದ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಮಾಧುಸ್ವಾಮಿ ವಿವರಿಸಿದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…