ಅಲ್ಲದೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ನಿಯಮ ಸರಳೀಕರಿಸಿ ಮೂರು ತಲೆಮಾರು ಎಂದು ಇರುವುದನ್ನು ಕೈಬಿಟ್ಟು ಒಂದು ತಲೆಮಾರು ಎಂದು ಮಾಡಬೇಕು. ಈ ಕುರಿತು ಸದನವು ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು. ಇವರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡಿದರೆ ರಕ್ತ ಕ್ರಾಂತಿ ಆಗುತ್ತದೆ ಎಂದು ಅವರು ಎಚ್ಚರಿಸಿದರು.
ವಿಧಾನಸಭೆಯಲ್ಲಿ ಬುಧವಾರ ನಿಯಮ 69 ರಡಿ ಹರತಾಳು ಹಾಲಪ್ಪ ಮತ್ತು ದಿನಕರ ಶೆಟ್ಟಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ‘ಶರಾವತಿ ಸಂತ್ರಸ್ತರ ವಿಚಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಒಯ್ದು ಇತ್ಯರ್ಥಪಡಿಸುತ್ತೇವೆ. ಈ ವಿಚಾರವನ್ನು ನಮಗೆ ಬಿಡಿ’ ಎಂದು ಹೇಳಿದರು.
ಈ ಪ್ರಕರಣಗಳಲ್ಲಿ ಒತ್ತುವರಿದಾರರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿರುವುದರ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸಲಾಗುತ್ತಿದೆ. ಈ ನೋಟಿಸ್ ಒಕ್ಕಲೆಬ್ಬಿಸಲು ಅಲ್ಲ. ಅಲ್ಲಿ ವಾಸವಿರುವುದಕ್ಕೆ ದಾಖಲೆಗಳ ಪರಾಮರ್ಶೆಗೆ ಮಾತ್ರ. ಈ ರೀತಿ ಸಂಗ್ರಹಿಸಿದ ದಾಖಲೆಗಳು ವಿಭಾಗೀಯ ಅಧಿಕಾರಿಗೆ ಹೋಗುತ್ತದೆ. ಈ ನೋಟಿಸಿನ ಬಗ್ಗೆ ಭಯ ಬೇಕಿಲ್ಲ. ಅಪ ಪ್ರಚಾರಗಳಿಗೆ ಕಿವಿಗೊಡಬೇಕಾಗಿಲ್ಲ ಎಂದರು.
1980ರ ಅರಣ್ಯ ಕಾಯ್ದೆ ಜಾರಿಗೆ ಬಂದ ಮೇಲೆ ರಾಜ್ಯ ಸರ್ಕಾರ ಕೇಂದ್ರದ ಮತ್ತು ಸುಪ್ರೀಂಕೋರ್ಟ್ ಒಪ್ಪಿಗೆ ಪಡೆಯದೇ ಜಮೀನು ಡಿ-ನೋಟಿಫೈ ಮಾಡಿದ್ದನ್ನು ಹೈಕೋರ್ಟ್ ಒಪ್ಪಿಕೊಂಡಿಲ್ಲ. ಇದು ನ್ಯಾಯಾಂಗ ಉಲ್ಲಂಘನೆ ಆಗುವುದರಿಂದ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಮಾಧುಸ್ವಾಮಿ ವಿವರಿಸಿದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…