ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet

ರಿಪ್ಪನ್‌ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು.




ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರರವರು ರಾಜ್ಯ ಸರಕಾರದ ಅಧಿವೇಶನದಲ್ಲಿ ಮಾತನಾಡಿ ಪರಿಹಾರ ಕಾರ್ಯ ಕಂಡುಕೊಳ್ಳಲಿದ್ದಾರೆ ಎಂದರು.


ಶರಾವತಿ ಮುಳುಗಡೆ ಸಂತ್ರಸ್ಥರ ಮುಖಂಡ ಬಿಳಿಯನಾಯ್ಕ್ ಮಾತನಾಡಿ ಕಷ್ಟದ ಸಮಯದಲ್ಲಿ ಧರ್ಮಸ್ಥಳದ ಮಂಜುನಾಥೇಶ್ವರ ಸನ್ನಿಧಿಗೆ ಹೋಗಿ ಬರುವುದು ಮಲೆನಾಡ ಜನರ ವಾಡಿಕೆ.ಅದರಂತೆಯೇ ಬಹುಕಾಲದ ಸಮಸ್ಯೆಯಿಂದ ಬಳಲುತ್ತಿರುವ ನಾವುಗಳು  ಶಾಸಕರಾದ ಹರತಾಳು ಹಾಲಪ್ಪನವರೊಂದಿಗೆ ಇತ್ತೀಚೆಗೆ ಧರ್ಮಸ್ಥಳಕ್ಕೆ ಹೋಗಿ ಬಂದಿದ್ದೇವೆ ಇದನ್ನೇ ದೊಡ್ಡ ವಿಷಯವೆಂದು ಮಾಜಿ ಶಾಸಕರು ಮುಳುಗಡೆ ಸಂತ್ರಸ್ಥರ ಬಗ್ಗೆ ಹಗುರವಾಗಿ ಟೀಕಿಸುತ್ತಿದ್ದಾರೆ. ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ತೀರ್ಥಹಳ್ಳಿಗೆ ಬಂದಾಗ ಎಲ್ಲಾ ಮುಳಗಡೆ ಸಂತ್ರಸ್ಥ ರೈತರು ಸಮಸ್ಯೆ ಪರಿಹರಿಸುವಂತೆ ಹಕ್ಕೊತ್ತಾಯ ಮಂಡಿಸಿದ್ದೆವು. ಇಷ್ಟೆಲ್ಲಾ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಮಾಜಿ ಶಾಸಕರು ಟೀಕಿಸುತ್ತಿರುವುದು ಮುಳುಗಡೆ ಸಂತ್ರಸ್ತರಿಗೆ ಬೇಸರ ತರಿಸುತ್ತದೆ ಎಂದರು.




ಬಿಜೆಪಿ ಮುಖಂಡ ಆನಂದ್ ಮೆಣಸೆ ಮಾತನಾಡಿ ಮುಳುಗಡೆ ಸಂತ್ರಸ್ಥರ ಬಗ್ಗೆ ಇಷ್ಟು ಕಾಲ ಕಾಳಜಿ ಇಲ್ಲದೆ ಈಗ ಬೇಳೂರುರವರಿಗೆ ಏಕಾ ಏಕಿ ಪ್ರಜ್ಞೆ ಬಂದಂತಿದೆ. ಮುಳಗಡೆ ಸಂತ್ರಸ್ಥರ ಸಮಸ್ಯೆಯ ಗಂಧಗಾಳಿ ಗೊತ್ತಿಲ್ಲದ ಗೋಪಾಲಕೃಷ್ಣ ಪ್ರಚಾರಕ್ಕಾಗಿ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಇವರಿಂದ ಕ್ಷೇತ್ರಕ್ಕಾಗಲೀ, ಜನರಿಗಾಗಲೀ ಯಾವ ಪ್ರಯೋಜನವೂ ಇಲ್ಲ. ಹುರುಳಿಲ್ಲದ ಆರೋಪವನ್ನು ಬಿಟ್ಟು ಮಾಡುತ್ತಿರುವ ಒಳ್ಳೆ ಕಾರ್ಯಕ್ಕೆ ಕೈಜೋಡಿಸಿ ಇಲ್ಲವಾದರೆ ನಿಮ್ಮನ್ನು ಜನ ಕ್ಷಮಿಸಲಾರರು ಎಂದು ಆಕ್ರೋಶವ್ಯಕ್ತಪಡಿಸಿದರು.





ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಮುಖಂಡ ಆರ್ ಟಿ ಗೋಪಾಲ್, ರಮೇಶ್ ಹೆಬ್ಬುರುಳಿ ,ಹೆಡ್ತಿ ಷಣ್ಮುಖಪ್ಪ, ಸಂಗಣ್ಣಕೆರೆ ಹಿರಿಯಣ್ಣ, ಚಂದ್ರಕುಮಾರ, ಹೂವಪ್ಪ, ಮಹೇಶ ಇನ್ನಿತರರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

6 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

7 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

9 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago