ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್ಎಸ್ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್ಎಸ್ಎಸ್ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಗರದ ಹೊನ್ನಾಳಿ ರಸ್ತೆಯಲ್ಲಿರುವ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ 50 ಜನರ ಪ್ರಮುಖರ ಸಭೆ ನಡೆದಿದೆ. ಸಭೆ ಮುಗಿಸಿದ ನಂತರ ಮೋಹನ್ ಭಾಗವತ್ ನಗರದ ವಿವಿಧೆಡೆ ಭೇಟಿ ನೀಡಿದ್ದಾರೆ.
ಸಂಜೆಯ ವೇಳೆಗೆ ನಗರದ ಕೋಟೆಯಲ್ಲಿರುವ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ಓಟಿ ರಸ್ತೆಯಲ್ಲಿರುವ ದಿ.ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿದ್ದಾರೆ. ನಗರದ ಹಿಂದೂ ಶಕ್ತಿ ಕೇಂದ್ರವಾದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸರ ಸಂಚಾಲಕರಿಗೆ ಮಂಗಳವಾದ್ಯದೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಗಿದೆ.
ದೇವಸ್ಥಾನದ ವಾತಾವರಣ ಕಂಡು ಸಂತೋಷ ಪಟ್ಟ ಮೋಹನ್ ಭಾಗವತರು ದೇವಸ್ಥಾನವನ್ನ ಅದ್ಬುತವೆಂದು ಬಣ್ಣಿಸಿದ್ದಾರೆ. ನಾಳೆ ಪೇಸ್ ಕಾಲೇಜಿನಲ್ಲಿ ಸಭೆ ನಡೆಯಲಿದ್ದು, 650 ಜನ ಭಾಗಿಯಾಗಲಿದ್ದಾರೆ. ನಾಡಿದ್ದು ಸಹ ನಗರದಲ್ಲಿಯೇ ಇದ್ದು ಸಂಜೆಯ ಮೇಲೆ ಪ್ರಯಾಣ ಬೆಳೆಸುವ ನಿರೀಕ್ಷೆ ಇದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್