ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ?
ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.
ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸೂಚನೆ ನೀಡಿದ್ದಾರೆ.
ಗೈಡ್ ಲೈನ್ಸ್ ಏನು ?
ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಜ. 1ರ ಬೆಳಗಿನ ಜಾವ 1ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.
ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.
ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.
ಮಧ್ಯ ಮಾರಾಟವನ್ನು ರಾತ್ರಿ 11.30 ರವರೆಗೆ ಮಾತ್ರ ಮಾಡುವುದು.
ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.
ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.
ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.
ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.
ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.
60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.
ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.
ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸುವುದು.
ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ, ಪೊಲೀಸ್ ಕಂಟ್ರೋಲ್ ರೂಂ ಮೊ. 9480803300, 08182 261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವುದು. ಈ ಸಂದರ್ಭದಲ್ಲಿ ಡಿವೈಎಸ್ಪಿ, ಡಿ ಸಿ ಆರ್ ಬಿ, ಮತ್ತು ಡಿ ವೈ ಎಸ್ ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್