ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸದ್ಯ ರಸ್ತೆ ಅಗಲೀಕರಣ ಕಾಮಗಾರಿ ಜೋರಾಗಿ ನಡೆಯುತ್ತಿದೆ.ಶಾಸಕ ಹರತಾಳು ಹಾಲಪ್ಪ ರವರ ಅಣತಿಯಂತೆ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದೆಯಾದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ.
ಇಂದು ರಸ್ತೆ ಅಗಲೀಕರಣ ಅವಾಂತರ ದಿಂದ ಎರಡು ಅಪಘಾತಗಳಾಗಿದೆ. ಒಂದು ಘಟನೆ ಗಣಪತಿ ಕೆರೆಯ ಬಳಿಯಲ್ಲಿ ಸಂಭವಿಸಿದರೆ, ಇನ್ನೊಂದು ಘಟನೆ ಬಸವನ ಹೊಳೆ ಬಳಿ ಸಂಭವಿಸಿದೆ.
ಬೈಕ್ ಅಪಘಾತ :
ಇಂದು ಬೆಳಿಗ್ಗೆ ಟಿವಿಎಸ್ ಎಕ್ಸ್ಲ್ ಹಾಗೂ ಇನ್ನೊಂದು ಬೈಕ್ನ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ಧಾನೆ. ಘಟನೆಯಲ್ಲಿ ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಎಕ್ಸೆಲ್ ಬೈಕ್ ನಡುವೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ನಿಯಂತ್ರಣ ತಪ್ಪಿ ಬೈಕ್, ಅಲ್ಲಿಯೇ ನಡೆಯುತ್ತಿದ್ದ ಅಗಲೀಕರಣ ಕಾಮಗಾರಿಯ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ.
ಹೊಂಡಕ್ಕೆ ಬಿದ್ದ ಕಾರು :
ಬೆಳಗ್ಗಿನ ಜಾವ ಅತಿ ವೇಗವಾಗಿ ಬಂದ ಕಾರೊಂದು, ನೇರವಾಗಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಬಿದ್ದಿದೆ. ಕಾಮಗಾರಿಗಾಗಿ ಕಟ್ಟಿದ್ದ ಕಟ್ಟೆಗಳ ನಡುವೆ ಬಿದ್ದಿರುವ ಕಾರು ಅಲ್ಲಿಯೇ ಸಿಲುಕಿಕೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.
ಅಗಲೀಕರಣ ಕಾಮಗಾರಿಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಿಲ್ಲ, ಹೊಂಡ ತೆಗೆದಿರುವ ಜಾಗಗಳಲ್ಲಿ ವಾಹನ ಸಂಚಾರಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸಿಲ್ಲ, ಮುನ್ನೆಚ್ಚರಿಕಾ ಬೋರ್ಡ್ಗಳನ್ನು ಹಾಕಿಲ್ಲ, ಹೀಗಾಗಿ ಆಕ್ಸಿಡೆಂಟ್ಗಳು ಸಂಭವಿಸುತ್ತಿವೆ. ಆದ್ದರಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಲ್ಲಿ ಮುನ್ನೆಚ್ಚರಿಕೆ ವಹಿಸುವ ಕ್ರಮಗಳನ್ನು ಕೈಗೊಳ್ಳಲಿ ಎನ್ನುತ್ತಿದ್ದಾರೆ ಸ್ಥಳೀಯರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್