ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ.




ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು ಸೋಮಾರಿ ಸಿಬ್ಬಂದಿಗಳ Fuse ಮಾಫ಼ಿಯಾ!!!!!

ಆಗಸ್ಟ್ 28 ರಂದು ಬೆಳ್ಳೂರು ಗ್ರಾಮದ ರೈತನೊಬ್ಬ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದ,ಇಂದು ಹರತಾಳಿನಲ್ಲಿ ಹೆಂಡತಿ‌ ಮಕ್ಕಳ ಕಣ್ಣೆದುರಲ್ಲೇ ಇನ್ನೂಬ್ಬ ರೈತ ಶೇಷಗಿರಿ ಮೃತಪಟ್ಟಿದ್ದಾರೆ.ಇನ್ನೇಷ್ಟು ಜೀವ ಬಲಿ ಬೇಕು…????

ಇಲಾಖೆ ವತಿಯಿಂದ ಆ ಕುಟುಂಬಕ್ಕೆ ಪರಿಹಾರ ಕೊಡಬಹುದು ಆದರೆ ಆ ಮಕ್ಕಳಿಗೆ ತಂದೆಯನ್ನು, ಹೆಂಡತಿಗೆ ಪತಿಯನ್ನು ಹಿಂದಿರುಗಿಸಲು ಸಾಧ್ಯವೇ…???ನಿಮ್ಮ ಆತ್ಮ ಸಾಕ್ಷಿಯನ್ನು ಒಮ್ಮೆ ಕೇಳಿಕೊಳ್ಳಿ..




ಇಲಾಖೆಗಳಲ್ಲಿಯೇ ದಕ್ಷ ಇಲಾಖೆ ಮೆಸ್ಕಾಂ ಇಲಾಖೆ ಅದರ ಬಗ್ಗೆ ಎರಡು ಮಾತಿಲ್ಲ ಆದರೆ ಕೆಲವೇ ಕೆಲವು ಸೋಮಾರಿ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಅತ್ಯುತ್ತಮ ಇಲಾಖೆಗೆ ಕಪ್ಪುಚುಕ್ಕೆ, ಇನ್ನೂ ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ಗ್ರಾಮೀಣ ಭಾಗದ ಜನ ಇಲಾಖೆಯ ವಿರುದ್ದ ತೀವ್ರವಾಗಿ ಪ್ರತಿಭಟಿಸುವ ದಿನ ದೂರವಿಲ್ಲ…

ಮೆಸ್ಕಾಂ ಇಲಾಖೆ ಮೂರು ಎಡವಟ್ಟುಗಳು :

FUSE ಮಾಫಿಯಾ

ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ, Fuse ಒಂದು ಕನಿಷ್ಠವಾಗಿ ಇರಬೇಕಾದ ಸುರಕ್ಷಾ ಉಪಕರಣ. ದೋಷದ ಸಂದರ್ಭದಲ್ಲಿ, ವಿದ್ಯುತ್ ಮಂಡಲ ಹಾಗೂ ಬಳಕೆದಾರರ ರಕ್ಷಣೆಗಾಗಿ ವಿದ್ಯುತ್ ಸಂಪರ್ಕ ತಾನಾಗಿಯೇ ಕಡಿತಗೊಳ್ಳಬೇಕು.ಯಾವುದೇ ಸಲಕರಣೆ ಸುಟ್ಟು ಹೋದರೂ ವಿದ್ಯುತ್ ಹರಿವು ನಿಲ್ಲುತ್ತದೆ,ಆದ್ದರಿಂದ ಯಾವುದೇ ಉಪಕರಣ ಸುಟ್ಟು ಹೋಗುವುದಕ್ಕಿಂತ ಮೊದಲು ಫ್ಯೂಸ್ ಸುಡುತ್ತದೆ. ಫ್ಯೂಸ್ ತಂತಿಯನ್ನು ಸೀಸ ಮತ್ತು ಸತುಗಳ ಮಿಶ್ರಲೋಹದಿಂದ ಮಾಡಿರುತ್ತಾರೆ. ಅದು ಕಡಿಮೆ ಶಾಖದಲ್ಲಿ ಕರಗುತ್ತದೆ.ಫ್ಯೂಸ್ ಹೋಯಿತು ಅಂದರೆ ಅಧಿಕ ವಿದ್ಯುತ್ ಪ್ರವಹಿಸಿದೆ ಅಥವಾ ಶಾರ್ಟ್ ಆಗಿದೆ ಎಂದರ್ಥ.

ಕೆಲವೊಮ್ಮೆ ಪದೇ ಪದೇ ಫ್ಯೂಸ್ ಹೋಗುವುದನ್ನು ತಪ್ಪಿಸಲು,ಕೆಲವು ಸೋಮಾರಿ ಸಿಬ್ಬಂದಿಗಳು ದಪ್ಪನೆಯ ತಾಮ್ರದ ತಂತಿಯನ್ನು ಉಪಯೋಗಿಸುತ್ತಾರೆ. ಅದು ತುಂಬಾ ಅಪಾಯಕಾರಿ.

ಕೂಡಲೇ ಮೆಸ್ಕಾಂ ಇಲಾಖೆಯ ಅಧಿಕಾರಿಗಳ ತಂಡ ಕೆಲವು ಸೋಮಾರಿ ಸಿಬ್ಬಂದಿಗಳು ಮಾಡಿರುವ Fuse ಎಡವಟ್ಟನ್ನು ಸರಿಪಡಿಸಬೇಕಾಗಿದೆ.ಒಂದು ವೇಳೆ fuse ಸರಿಯಾದ ಕಾರ್ಯ ನಿರ್ವಹಿಸಿದ್ದಲ್ಲಿ ಇಂದು ಹರತಾಳು ಗ್ರಾಮದ ರೈತ ಶೇಷಗಿರಿ ಬಲಿಯಾಗುತ್ತಿರಲಿಲ್ಲ.

ಹಳೆಯ ತಂತಿಗಳು:

ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹಳೆಯ ವಿದ್ಯುತ್ ತಂತಿಗಳು ಕಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ಇವನ್ನು ಬದಲಾಯಿಸದೇ ಇದ್ದಲ್ಲಿ ಹರತಾಳು ಗ್ರಾಮದ ರೈತ ಶೇಷಗಿರಿ ಸಾವನ್ನಪ್ಪಿದಂತೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದು.

ಲೈನ್ ಮ್ಯಾನ್ ಗಳು ಕಾರ್ಯ ಕ್ಷೇತ್ರದಲ್ಲಿ ಇರದೇ ಇರುವುದು

ಹಳ್ಳಿ ಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಮೆಸ್ಕಾಂ ಸಿಬ್ಬಂದಿಗಳು ಕಾರ್ಯಕ್ಷೇತ್ರಕ್ಕಿಂತ ದೂರದಲ್ಲಿ ಮನೆ ಮಾಡಿರುವುದರಿಂದ ಕೆಲ ಸಮಯದಲ್ಲಿ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲು ಕಷ್ಟಕರವಾಗಿರುವುದರಿಂದ ಕಾರ್ಯಕ್ಷೇತ್ರದಲ್ಲೆ ಇರುವಂತೆ ನಿಯೋಜಿಸುವುದರಿಂದ ಮುಂದಾಗುವ ಅಪಘಾತ ತಡೆಯಬಹುದಾಗಿದೆ.

ಒಟ್ಟಾರೆಯಾಗಿ ಹಗಲಿರುಳು ಶ್ರಮಿಸುವ ಮೆಸ್ಕಾಂ ಲೈನ್ ಮ್ಯಾನ್ ಮತ್ತು ಸಿಬ್ಬಂದಿಗಳು ದಿನದ 24 ಗಂಟೆಯು ರೈತರ ,ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಅವರ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸುತ್ತಾ ಕೆಲ ಸೋಂಬೇರಿ ಸಿಬ್ಬಂದಿ ಹಾಗೂ ಜಡ್ಡುಗಟ್ಟಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾ ಕಾದು ನೋಡಬೇಕಾಗಿದೆ.

ರೈತರು,ಶ್ರಮಿಕರು, ಜನಸಾಮಾನ್ಯರು ಕಟ್ಟಬೇಕಾದ ಅಲ್ಪಸ್ವಲ್ಪ ವಿದ್ಯುತ್ ಬಾಕಿ ಹಣವನ್ನು ದರ್ಪದಿಂದ ಗೂ…. ತಂಡದ ಮೂಲಕ ವಸೂಲಿ ಮಾಡಿಸುವ ಅಧಿಕಾರಿಗಳಿಗೆ ಇರುವ ಕಾರ್ಯಕ್ಷಮತೆ, ಸಮರ್ಪಕ ನಿರ್ವಹಣೆ ಮಾಡವಾಗ ಯಾಕಿಲ್ಲ ಎಂಬುವುದೇ ಯಕ್ಷಪ್ರಶ್ನೆ………….?????

……….ನೋವಿನಿಂದ ಪೋಸ್ಟ್ ಮ್ಯಾನ್ ನ್ಯೂಸ್



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

11 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

13 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

16 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

16 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

16 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

17 hours ago