ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.
ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್ ,ಇಸೂಬ್ ಸಾಬ್,ಇಲಿಯಾಸ್ ರಿಪ್ಪನ್ಪೇಟೆ ,ಎಸ್ ಕೆ ಮೊಹಮ್ಮದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನೂತನ ಪದಾದಿಕಾರಿಗಳ ವಿವರ :
ಅಧ್ಯಕ್ಷರು : ಹಾಜಿ ಜಿ ಮಹಮ್ಮದ್ ಹೊಸನಗರ
ಉಪಾಧ್ಯಕ್ಷರು : ಅರ್ ಎ ಚಾಬುಸಾಬ್ ರಿಪ್ಪನ್ಪೇಟೆ
ಕಾರ್ಯದರ್ಶಿ : ಸಾದಿಕ್ ಅಲಿ ಕೆ ಎ ಕಚ್ಚಿಗೆಬೈಲ್
ಖಜಾಂಚಿ : ಹೆಚ್ ಅಬ್ದುಲ್ಲಾ ನಿಟ್ಟೂರು
ಸದಸ್ಯರು : ಹಾಜಿ ಜಿ ಯೂಸುಫ್ ಹೊಸನಗರ , ಇಸಾಕ್ ಹೊಸನಗರ,
ಇಬ್ರಾಹಿಂ ಮಾವಿನಕೊಪ್ಪ,ಅಬ್ದುಲ್ ಕಾದರ್ ಬುಕಾರಿ ಮಾರುತಿಪುರ,
ಜಿ ಎಂ ರೆಹಮಾನ್ ಹೊಸನಗರ,ಹಂಝ ನಗರ,ಎಸ್ ಕೆ ಮೊಹಮ್ಮದ್ ರಿಪ್ಪನ್ಪೇಟೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್