ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ.
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ.
ಕೂಡ್ಲಿಕೊಪ್ಪ ಸ್ವಾಮಿ ಅವರ ಕುಟುಂಬ ಜೀವನಕ್ಕಾಗಿ ಕೃಷಿ ಕೂಲಿ ಕಾರ್ಮಿಕರಾಗಿದ್ದು ಅಗ್ನಿ ಅವಗಘಡದಿಂದ ಸ್ವಾಮಿ ಅವರ ಮನೆ ಪರಿಕರ ಸಂಪೂರ್ಣ ನಾಶವಾಗಿದ್ದು,ಉಟ್ಟ ಬಟ್ಟೆ ಬಿಟ್ಟರೆ ಅವರ ಪಾಲಿಗೆ ಮತ್ತೇನೆನೂ ಉಳಿದಿಲ್ಲ.
ಈ ಕೂಡಲೇ ಸಂಬಂಧಪಟ್ಟ ಗ್ರಾಮಡಳಿತ ಹಾಗೂ ಇಲಾಖೆ ಇತ್ತ ಗಮನಹರಿಸಿ ಸರ್ಕಾರದಿನ ಸಿಗಬೇಕಾದ ಪರಿಹಾರ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ..
ಕುಟುಂಬ ಅತಿ ಕಡು ಬಡ ಕುಟುಂಬವಾಗದ್ದು . ಕೂಲಿ ಕೆಲಸ ಮಾಡಿ ಜೀವನ ನೆಡಸುತ್ತಿರುತ್ತಾರೆ. ಹಾಗೂ ಇಬ್ಬರು ಸಣ್ಣ ಮಕ್ಕಳು ಇದ್ದು ಕುಟುಂಬದ ಕಷ್ಟವನ್ನು ಅರಿತು ಗ್ರಾಮಸ್ಥರು ಹಾಗೂ ಸಹಕರಿಸುವಂತೆ ಕೋರಿದ್ದಾರೆ. ಈ ಬಡ ಕುಟುಂಬಕ್ಕೆ ಸಹಾಯ ಮಾಡಲು ಇಚ್ಚಿಸುವವರು ಈ ಕೆಳಗಿನ ನಂಬರ್ ಗೆ ಸಂಪರ್ಕಿಸಲು ಕೋರಿದೆ.
ಮಹೇಶ್ ಎಸ್ ಬಾಣಿಗ 9844733213,ಇಂದ್ರೇಶ್ ಎನ್ ಹೊಸಕೆಸರೆ 8951474804,ಮನೋದರ ಕಚ್ಚಿಗೆಬೈಲ್ 99019 83727
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್