ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ.
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ.
ಕೂಡ್ಲಿಕೊಪ್ಪ ಸ್ವಾಮಿ ಅವರ ಕುಟುಂಬ ಜೀವನಕ್ಕಾಗಿ ಕೃಷಿ ಕೂಲಿ ಕಾರ್ಮಿಕರಾಗಿದ್ದು ಅಗ್ನಿ ಅವಗಘಡದಿಂದ ಸ್ವಾಮಿ ಅವರ ಮನೆ ಪರಿಕರ ಸಂಪೂರ್ಣ ನಾಶವಾಗಿದ್ದು,ಉಟ್ಟ ಬಟ್ಟೆ ಬಿಟ್ಟರೆ ಅವರ ಪಾಲಿಗೆ ಮತ್ತೇನೆನೂ ಉಳಿದಿಲ್ಲ.
ಈ ಕೂಡಲೇ ಸಂಬಂಧಪಟ್ಟ ಗ್ರಾಮಡಳಿತ ಹಾಗೂ ಇಲಾಖೆ ಇತ್ತ ಗಮನಹರಿಸಿ ಸರ್ಕಾರದಿನ ಸಿಗಬೇಕಾದ ಪರಿಹಾರ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ..
ಕುಟುಂಬ ಅತಿ ಕಡು ಬಡ ಕುಟುಂಬವಾಗದ್ದು . ಕೂಲಿ ಕೆಲಸ ಮಾಡಿ ಜೀವನ ನೆಡಸುತ್ತಿರುತ್ತಾರೆ. ಹಾಗೂ ಇಬ್ಬರು ಸಣ್ಣ ಮಕ್ಕಳು ಇದ್ದು ಕುಟುಂಬದ ಕಷ್ಟವನ್ನು ಅರಿತು ಗ್ರಾಮಸ್ಥರು ಹಾಗೂ ಸಹಕರಿಸುವಂತೆ ಕೋರಿದ್ದಾರೆ. ಈ ಬಡ ಕುಟುಂಬಕ್ಕೆ ಸಹಾಯ ಮಾಡಲು ಇಚ್ಚಿಸುವವರು ಈ ಕೆಳಗಿನ ನಂಬರ್ ಗೆ ಸಂಪರ್ಕಿಸಲು ಕೋರಿದೆ.
ಮಹೇಶ್ ಎಸ್ ಬಾಣಿಗ 9844733213,ಇಂದ್ರೇಶ್ ಎನ್ ಹೊಸಕೆಸರೆ 8951474804,ಮನೋದರ ಕಚ್ಚಿಗೆಬೈಲ್ 99019 83727
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…