Headlines

ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.  ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ. ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ…

Read More

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More