Headlines

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ಅನೈತಿಕ ಚಟುವಟಿಕೆಯ ತಾಣವಾಗಿರುವ ಹೊಸನಗರ ಪರಿವೀಕ್ಷಣಾ ಮಂದಿರ (ಐಬಿ) : ಸಂಜೆಯಾಗುತಿದ್ದಂತೆ ಕುಡುಕರದ್ದೇ ದರ್ಬಾರ್ ಇಲ್ಲಿ!!!!!!!!

ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ ಎಲ್ಲಾ ರೀತಿಯ ವಾತಾವರಣವು ನಿರ್ಮಾಣವಾಗಿದೆ.  ಹೌದು ಹೊಸನಗರ ತಾಲ್ಲೂಕಿನ ಆಸುಪಾಸಿನ ಹುಂಚದ ಪದ್ಮಾವತಿ ದೇವಸ್ಥಾನ, ರಾಮಚಂದ್ರಾಪುರ ಮಠ, ಕಾರಣಗಿರಿ(ಕಾರ್ಗಡಿ)ಯ ಗಣಪತಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹೀಗೆ ವಿವಿಧ ದೇವಾಲಯಗಳನ್ನು ವೀಕ್ಷಿಸಲು ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಹೊಸನಗರ ತಾಲ್ಲೂಕಿನ ಕೊಡಚಾದ್ರಿ…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More

ಶಿವಮೊಗ್ಗ ಜಿಲ್ಲೆಗೆ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ.. ಪರಿಹಾರ ಯಾವ ಕಾಲಕ್ಕೋ!!!!!!

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ಆಸ್ಪತ್ರೆಗೆ ಸೀಮಾ ಬಾನು ಚಿಕಿತ್ಸೆಗೆ ಬಂದಾಗ ಶುಶ್ರೂಷಕಿಯರು ಜಿಲ್ಲಾ ವೈರಾಣು ಪರೀಕ್ಷಾ ಕೇಂದ್ರಕ್ಕೆ ಅವರ…

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!

ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು. ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ  ಹೋರಾಟದ ಪೂರ್ವಭಾವಿ ರೂಪುರೇಷಗಳನ್ನು ಚರ್ಚಿಸುವುದಕ್ಕಾಗಿ ಇಂದು ಸರ್ವಧರ್ಮದ ಪ್ರಮುಖರು, ಸರ್ವ ಪಕ್ಷದ ಪ್ರಮುಖರು ಹಾಗೂ ಹೊಸನಗರ ತಾಲೂಕಿನ ನಾಗರಿಕರು ಉಪಸ್ಥಿತರಿದ್ದರು. ಈ ಸಭೆಯ ಉದ್ದೇಶ ಸಂಘಟನೆ ಮತ್ತು ಹೋರಾಟದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಬೇಕಾದಂತಹ ಯೋಜನೆಯನ್ನು ರೂಪಿಸುವುದಾಗಿತ್ತು ಅದರಂತೆ ಉಪಸ್ಥಿತರಿದ್ದ ಮುಖಂಡರುಗಳು…

Read More