ಹೊಸನಗರ ವಿಧಾನ ಸಭಾ ಕ್ಷೇತ್ರ ಮರಳಿ ಪಡೆಯುವ ಹೋರಾಟದ ಪೂರ್ವಭಾವಿ ಸಭೆ : ಹೋರಾಟಕ್ಕೆ ನಿಟ್ಟೂರು ಶ್ರೀಗಳ ಸಾರಥ್ಯ !!!!!
ಹೊಸನಗರ ವಿಧಾನಸಭಾಕ್ಷೇತ್ರ ಹೋರಾಟದ ಕೂಗು ಸಂಘಟನೆಯೇ ಶಕ್ತಿ ಎಂಬ ದ್ಯೇಯದೊಂದಿಗೆ ಮುಂದಿನ ಹೋರಾಟದ ರೂಪುರೇಷೆ ಸಭೆ ನಡೆಯಿತು. ಸಂಘಟನೆಯೇ ಮೂಲಶಕ್ತಿ ಎಂಬ ಯೋಜನೆ ಮುಖಾಂತರ ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಪೂರ್ವಭಾವಿ ರೂಪುರೇಷಗಳನ್ನು ಚರ್ಚಿಸುವುದಕ್ಕಾಗಿ ಇಂದು ಸರ್ವಧರ್ಮದ ಪ್ರಮುಖರು, ಸರ್ವ ಪಕ್ಷದ ಪ್ರಮುಖರು ಹಾಗೂ ಹೊಸನಗರ ತಾಲೂಕಿನ ನಾಗರಿಕರು ಉಪಸ್ಥಿತರಿದ್ದರು. ಈ ಸಭೆಯ ಉದ್ದೇಶ ಸಂಘಟನೆ ಮತ್ತು ಹೋರಾಟದ ಉದ್ದೇಶವನ್ನು ಕಾರ್ಯರೂಪಕ್ಕೆ ತರಲು ಬೇಕಾದಂತಹ ಯೋಜನೆಯನ್ನು ರೂಪಿಸುವುದಾಗಿತ್ತು ಅದರಂತೆ ಉಪಸ್ಥಿತರಿದ್ದ ಮುಖಂಡರುಗಳು…